7:12 AM Saturday16 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

LIC | ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮದಿಂದ ಹೊಸ ಪಾಲಿಸಿ ಜೀವನ್ ಉತ್ಸವ್ ಪ್ಲಾನ್ ಬಿಡುಗಡೆ

07/12/2023, 14:04

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ (LIC) ಇದೀಗ ಹೊಸ ಪಾಲಿಸಿಯೊಂದನ್ನು ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಬಿಡುಗಡೆ ಮಾಡಿದೆ.
ಎಲ್‌ಐಸಿ ಪ್ರತಿನಿಧಿಗಳು ಜನರ ಭವಿಷ್ಯದ ದೃಷ್ಟಿಯಿಂದ ಹೆಚ್ಚು ಪಾಲಿಸಿ ಮಾಡಿಸಬೇಕು. ಅದಕ್ಕೆ ಪೂರಕವಾಗಿ ಭಾರತೀಯ ಜೀವ ವಿಮಾ ನಿಗಮ ಹೊಸದಾಗಿ ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಪರಿಚಯಿಸಿರುವ ಪಾಲಿಸಿಗಳ ಪರಿಚಯ ಮಾಡಿಕೊಡಬೇಕು ಎಂದು ತಾಲ್ಲೂಕು ಎಲ್‌ಐಸಿ ಉಪ ಶಾಖಾ ಕಚೇರಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್‌ ಹೇಳಿದರು.
ಪಟ್ಟಣದ ಎಲ್‌ಐಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಎಲ್‌ಐಸಿ ಏಜೆಂಟರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿಧಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಪಾಲಿಸಿ ಪಡೆದವರಿಗೆ ಉತ್ತಮ ಸೇವೆ ನೀಡಬೇಕು ಎಂದು ಹೇಳಿದರು.
ಎಷ್ಟೋ ಪಾಲಿಸಿದಾರರಿಗೆ ಎಲ್‌ಐಸಿ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿದಿರುವುದಿಲ್ಲ. ಹಾಗಾಗಿ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಆದ್ದರಿಂದ ಪ್ರತಿ ಪಾಲಿಸಿದಾರನಿಗೆ ಅರಿವು ಮೂಡಿಸುವ ಜವಾಬ್ದಾರಿ ಪ್ರತಿನಿಧಿಗಳದಾಗಿದೆ ಎಂದು ಹೇಳಿದರು.
ಪ್ರತಿನಿಧಿಗಳು ನಗರ ಹಾಗೂ ಪಟ್ಟಣಗಳನ್ನು ಮಾತ್ರ ಕೇಂದ್ರೀಕರಿಸದೆ, ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ ಪಾಲಿಸಿ ಮಾಡಿಸಬೇಕು. ಹಾಗೆ ಮಾಡುವುದರಿಂದ ಬಡವರು ಹಾಗೂ ಜನಸಾಮಾನ್ಯರಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ನಿಗಮದ ಉದ್ದೇಶವೂ ಈಡೇರುತ್ತದೆ ಎಂದು ಹೇಳಿದರು. ಎಲ್‌ಐಸಿ ಅಧಿಕಾರಿ ಡಿ. ರವಿಶಂಕರ್, ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ರವೀಂದ್ರಯ್ಯ ಆ‌ರ್.ಕುಲಕರ್ಣಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು