5:49 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

LIC | ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮದಿಂದ ಹೊಸ ಪಾಲಿಸಿ ಜೀವನ್ ಉತ್ಸವ್ ಪ್ಲಾನ್ ಬಿಡುಗಡೆ

07/12/2023, 14:04

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ (LIC) ಇದೀಗ ಹೊಸ ಪಾಲಿಸಿಯೊಂದನ್ನು ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಬಿಡುಗಡೆ ಮಾಡಿದೆ.
ಎಲ್‌ಐಸಿ ಪ್ರತಿನಿಧಿಗಳು ಜನರ ಭವಿಷ್ಯದ ದೃಷ್ಟಿಯಿಂದ ಹೆಚ್ಚು ಪಾಲಿಸಿ ಮಾಡಿಸಬೇಕು. ಅದಕ್ಕೆ ಪೂರಕವಾಗಿ ಭಾರತೀಯ ಜೀವ ವಿಮಾ ನಿಗಮ ಹೊಸದಾಗಿ ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಪರಿಚಯಿಸಿರುವ ಪಾಲಿಸಿಗಳ ಪರಿಚಯ ಮಾಡಿಕೊಡಬೇಕು ಎಂದು ತಾಲ್ಲೂಕು ಎಲ್‌ಐಸಿ ಉಪ ಶಾಖಾ ಕಚೇರಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್‌ ಹೇಳಿದರು.
ಪಟ್ಟಣದ ಎಲ್‌ಐಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಎಲ್‌ಐಸಿ ಏಜೆಂಟರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿಧಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಪಾಲಿಸಿ ಪಡೆದವರಿಗೆ ಉತ್ತಮ ಸೇವೆ ನೀಡಬೇಕು ಎಂದು ಹೇಳಿದರು.
ಎಷ್ಟೋ ಪಾಲಿಸಿದಾರರಿಗೆ ಎಲ್‌ಐಸಿ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿದಿರುವುದಿಲ್ಲ. ಹಾಗಾಗಿ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಆದ್ದರಿಂದ ಪ್ರತಿ ಪಾಲಿಸಿದಾರನಿಗೆ ಅರಿವು ಮೂಡಿಸುವ ಜವಾಬ್ದಾರಿ ಪ್ರತಿನಿಧಿಗಳದಾಗಿದೆ ಎಂದು ಹೇಳಿದರು.
ಪ್ರತಿನಿಧಿಗಳು ನಗರ ಹಾಗೂ ಪಟ್ಟಣಗಳನ್ನು ಮಾತ್ರ ಕೇಂದ್ರೀಕರಿಸದೆ, ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ ಪಾಲಿಸಿ ಮಾಡಿಸಬೇಕು. ಹಾಗೆ ಮಾಡುವುದರಿಂದ ಬಡವರು ಹಾಗೂ ಜನಸಾಮಾನ್ಯರಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ನಿಗಮದ ಉದ್ದೇಶವೂ ಈಡೇರುತ್ತದೆ ಎಂದು ಹೇಳಿದರು. ಎಲ್‌ಐಸಿ ಅಧಿಕಾರಿ ಡಿ. ರವಿಶಂಕರ್, ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ರವೀಂದ್ರಯ್ಯ ಆ‌ರ್.ಕುಲಕರ್ಣಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು