11:05 PM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬದುಕೆನ್ನುವುದು ಒಂದು ಸ್ಪರ್ಧೆಯಲ್ಲ, ಸಂಘರ್ಷವೂ ಅಲ್ಲ; ಒಂದು ಸುಂದರ ಅನುಭೂತಿ..

22/02/2025, 18:15

ರಾಜೇಶ್ವರಿ ರಾವ್ ಬೆಂಗಳೂರು

info.reporterkarnataka@gmail.com

ನನ್ನ ಬದುಕು ಕಷ್ಟ ದುಃಖ ನೋವುಗಳಿಂದ ತುಂಬಿರಲಿ ಎಂದು ಯಾರಾದರೂ ಬಯಸುತ್ತಾರೆಯೇ? ಎಲ್ಲರಿಗೂ ಸುಖ ಸಂತೋಷ ನೆಮ್ಮದಿ ಸಮೃದ್ಧಿಯ ಬದುಕು ಬೇಕು. ಅದು ಸಹಜ ತಾನೇ. ಆದರೆ ದೇವರ ಲೀಲೆಯೇ ಬೇರೆ. ನಮ್ಮ ಕರ್ಮಾನುಸಾರ ಅನುಭವಿಸಿಯೇ ತೀರಬೇಕಾದ ಸುಖದುಃಖಗಳನ್ನು ಈ ಜೀವಿತಾವಧಿಯಲ್ಲಿ ಅನುಭವಿ ಸಿಯೇ ತೀರಬೇಕು. ಅದು ವಿಧಿಲಿಖಿತ. ಕೆಲವರ ಜೀವನದ ಆರಂಭದ ವರ್ಷಗಳಲ್ಲಿ ತುಂಬಾ ಸುಖ  ಸಂತೋಷದಲ್ಲಿ ಮೆರೆಯುತ್ತಾರೆ. ಆದರೆ ಮುಂದಿನ ದಿನ ಗಳಲ್ಲಿ ಅದೆಲ್ಲಿಂದಲೂ ಕಷ್ಟಕಾರ್ಪಣ್ಯಗಳು ಅವರನ್ನು  ಮುತ್ತಿಗೆ ಹಾಕಿ ಹೈರಾಣಾಗಿಸುತ್ತವೆ. ಇನ್ನು ಕೆಲವರು ಬಡತನ, ಅನಾರೋಗ್ಯ, ಪ್ರಿಯಬಂಧುಗಳ ವಿಯೋಗ, ಇತ್ಯಾದಿ ನೋವು ದುಃಖಗಳನ್ನು ಅನುಭವಿಸಿ ಕೊನೆ ಕಾಲದಲ್ಲಿ ಬದುಕು ಯಾವುದೋ ತಿರುವು ತೆಗೆದು ಕೊಂಡು ಇದ್ದುದರಲ್ಲಿ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದಕ್ಕೆ ತಾರ್ಕಿಕ ಕಾರಣವನ್ನು ಊಹಿಸುವುದು ಅಸಾಧ್ಯ. ಎಲ್ಲವನ್ನೂ ನಮ್ಮ ಪೂರ್ವಾರ್ಜಿತ ಕರ್ಮಗಳ ಫಲವೆಂದು ಭಾವಿಸಿ ಸುಮ್ಮನಿರಬೇಕು.
ವಾಸುಕಿ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ ಅಸಾಮಾನ್ಯ ಮೇಧಾವಿ. ಅತೀ ಬುದ್ಧಿವಂತಿಕೆ, ಅನುಪಮ ಜ್ಞಾಪಕ ಶಕ್ತಿ, ಏಕಾಗ್ರತೆ, ಹಠ ಸಾಧನೆ
ಅವನಗುಣಗಳು. ಶಾಲೆಯ ಉಪಾಧ್ಯಾಯರು ಅವನ ಚಾಣಾಕ್ಷತೆಯನ್ನು ಗುರುತಿಸಿ ಅವನ ತಂದೆಗೆ, “ಹುಡುಗ ನಮ್ಮ ಶಾಲೆಗೆ ಮಾತ್ರವಲ್ಲ, ಈ ರಾಜ್ಯಕ್ಕೆ ಹೆಸರು ತರುತ್ತಾನೆ. ಅವನ ವಿಧ್ಯಾಭ್ಯಾಸವನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬೇಡಿ ಎಂದು ತಿಳಿಹೇಳಿದರು.
ಅವನ ಅಪ್ಪನಿಗೆ ಮಗನಲ್ಲಿ ಅಂತಹಾ ಅಭೂತ
ಪೂರ್ವ ಪ್ರತಿಭೆ ಕಾಣಿಸಲಿಲ್ಲ,ಏಕೆಂದರೆ ಮನೆಯಲ್ಲಿ ಯಾವಾಗಲೂ ತನ್ನ ಪಾಡಿಗೆ ತಾನಿರುತ್ತಿದ್ದ ಮೂದೇವಿ ಯಂತ ಹುಡುಗ ಆತ.ಏನೋ ಹೆಡ್ಮಾಸ್ಟರ್ ಹೇಳಿದ ಮೇಲೆ ನಿಜವೇ ಇರಬಹುದು ಎಂದುಕೊಂಡರು. ವಾಸುಕಿ ಶಾಲಾ ಪಠ್ಯ ಪುಸ್ತಕ  ಕೈಗೆಸಿಕ್ಕಿದ ಒಂದೆರಡೇ ದಿನಗಳಲ್ಲಿ ಓದಿ ಮುಗಿಸುತ್ತಿದ್ದ.ಯಾವ ಪಠ್ಯದಲ್ಲಿದ್ದ ವಿಶಯಗಳ ಬಗ್ಗೆ ಯಾವ ಪ್ರಶ್ನೆ ಕೇಳಿದರೂ ಉತ್ತರಿ ಸುವ ನೆನಪುಶಕ್ತಿ ಅವನಿಗಿತ್ತು. ಹತ್ತನೇ ತರಗತಿಯಲ್ಲಿ ಮೊದಲ ರ್ಯಾಂಕ್ ಪಡೆದವನಿಗೆ ಗವರ್ಮೆಂಟ್  ಮೆರಿಟ್ ಸೀಟು ಸಿಕ್ಕಿ ಹೆಚ್ಚು ಖರ್ಚಿಲ್ಲದೆ ಇಂಜಿನಿಯರಿಂಗ್ ನಲ್ಲಿ ಟಾಪರ್ ಆದ. ಮುಂದೆ ವೈಜ್ಞಾನಿಕ ಸಂಶೋದನೆಯತ್ತ ಅವನ ಆಸಕ್ತಿ ಬೆಳೆಯಿತು. ಮುಂದಿನ ಜೀವನದಲ್ಲಿ ಹೆಸರು ಹಣ
ಗೌರವ ಎಲ್ಲವೂ ಅವನನ್ನು ಹುಡುಕಿಕೊಂಡು ಬಂತು. ಮದುವೆಯ ಬಗ್ಗೆ ಅವನ ಒಲವು ಇರಲಿಲ್ಲ. ಆದರೆ ಹೆತ್ತವರ ಒತ್ತಾಯಕ್ಕೆ ಮಣಿದು ವಧೂಪರೀಕ್ಷೆಗೆ ಹೋಗಲೇಬೇಕಾಯಿತು. ಹುಡುಗ ಹುಡುಗಿಯರ
ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವ ಸಂದರ್ಭದಲ್ಲಿ ತಾನು ಭೇಟಿಯಾದ ಪ್ರತಿಯೊಂದು ಹುಡುಗಿಯೂ ನೋಡಲು ರೂಪವತಿಯಾದರೂ ತಲೆಯಲ್ಲಿ ಬರೀ ಜೇಡಿಮಣ್ಣೇ ತುಂಬಿದೆ ಎನಿಸಿತವನಿಗೆ. ಒಂದು ಸ್ವಲ್ಪವೂ ಸಾಮಾನ್ಯ ಜ್ಞಾನವಿಲ್ಲ.ಆತ ಕೇಳುವ ಪ್ರಶ್ನೆಗಳೋ ಅವರ ತಲೆಯೊಳಗೆ ಹೋಗುತ್ತಿರಲಿಲ್ಲ. ಹವ್ಯಾಸವೇನೆಂದು ಪ್ರಶ್ನಿಸಿದರೆ..ಸಿನೆಮಾ ನೋಡುವುದು, ಸ್ನೇಹಿತರ ಜೊತೆ ಪಿಕ್ನಿಕ್, ಟೂರ್ ಹೋಗೋದು, ಶಾಪಿಂಗ್, ಹೊಸಅಡಿಗೆ ಕಲಿಯೋದು , ಕೇಕ್ ಮೇಕಿಂಗ್ ಇತ್ಯಾದಿ. ಅವನ ತಲೆಯಲ್ಲೋ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ಆವಿಷ್ಕಾರಗಳು, ಭಾರತ ದೇಶ ಮುಂದಿನ ಹತ್ತು ವರ್ಷಗಳಲ್ಲಿ ಮಾಡಬಹುದಾದ ಸಾಧನೆಗಳು, ಇಂತಹ ದೊಡ್ಡ ದೊಡ್ಡ ವಿಷಯಗಳು ತುಂಬಿದ್ದು ತಾನು ಜೀವನ ಸಂಗಾತಿಯಾಗಿ ಹುಡುಕುತ್ತಿರುವ ಬಹುತೇಕ ಕನ್ಯೆಯರಲ್ಲಿ ಒಬ್ಬ ಹುಡುಗಿಯೂ ಪಾಸಾಗಲಿಲ್ಲ. ಪ್ರತಿಯೊಬ್ಬರಲ್ಲೂ ಏನಾದರೊಂದು ಕೊಂಕುಹಿಡಿದು ತೋರಿಸುತ್ತಿದ್ದ. ಬೇಸತ್ತ ಹೆತ್ತವರು ನಿನ್ನ ಲೆವೆಲ್ ಗೆ ಸರಿ ಹೊಂದುವಂತ ವಧುವನ್ನು ನೀನೇ ಹುಡುಕಿಕೋ ಎಂದು ಕೈಎತ್ತಿಬಿಟ್ಟರು. ವಾಸುಕಿ ಯಾವಾಗಲೂ ಸವಾಲೆಸೆದರೆ ಸೋಲುವ ಆಸಾಮಿಯೇ ಅಲ್ಲ. ತನ್ನ ಸಹೋದ್ಯೋಗಿಯರಲ್ಲೇ ಆತನ ಬುದ್ಧಿ ಮತ್ತೆಗೆ ಸರಿಹೊಂದುವ ಅವನಷ್ಟೇ ವಯಸ್ಸಿನ ಹೆಣ್ಣು ಅವನ ವಧೂ ಪರೀಕ್ಷೆಯಲ್ಲಿ ಪಾಸಾಗಿ ಬಾಳಸಂಗಾತಿಯಾದಳು. ಇಬ್ಬರೂ ತಮ್ಮತಮ್ಮ ಉದ್ಯೋಗ ಪ್ರಗತಿಯಲ್ಲಿ ವ್ಯಸ್ತರು. ಒಂದೇ ಗುಣ ಒಂದೇ ರೀತಿಯ ಮಹತ್ವಾಕಾಂಕ್ಷೆಯುಳ್ಳ ಜೋಡಿಯ ಮನದೊಳಗೆ ದಾಂಪತ್ಯವನ್ನು ನಡೆಸಿ ಕೊಂಡು ಹೋಗುವ ಯಾವ ತಾಳ್ಮೆ ಆಕಾಂಕ್ಷೆಗಳೂ
ಇರಲಿಲ್ಲ. ಬರಬರುತ್ತಾ “ನೀನು ಮೇಲಾ ನಾನು ಮೇಲಾ” ಎಂಬ ಅಹಂಕಾರ ಮದುವೆಯೆಂಬ ಬಂಧನವನ್ನು ಕಿತ್ತೆಸೆದು ಡೈವರ್ಸ್ ನೀಡಿ ಬಿಡುಗಡೆ ಪಡೆಯುವಷ್ಟಕ್ಕೆ ಮುಟ್ಟಿತು. ಇದನ್ನು ‘ಇಗೋ ಕ್ಲ್ಯಾಶ್’ ಅನ್ನುತ್ತಾರೆ.
ಬದುಕೆನ್ನುವುದು ಒಂದು ಸ್ಪರ್ಧೆಯಲ್ಲ, ಸಂಘರ್ಷವೂ ಅಲ್ಲ. ಸರಳವಾಗಿ ಜೀವನವನ್ನು ಸಾಗಿಸುತ್ತ,ಅತೀ ಅಹಂಕಾರ, ಸ್ವ ಪ್ರತಿಷ್ಠೆ ಇಲ್ಲದೆ ನಡೆಸಿಕೊಂಡು  ಹೋಗುವ ಒಂದು ಸುಂದರ ಅನುಭೂತಿ. ನಮ್ಮ ಸಾಧನೆ, ಗಳಿಸಿದ ಐಶ್ವರ್ಯ, ಪಡೆದ ಪದಕಗಳು , ಬಿರುದುಗಳು ಯಾವುದೂ ಸಂತೋಷ ನೆಮ್ಮದಿ ಕೊಡುವುದಿಲ್ಲ. ಬದುಕನ್ನು “ಬಂದದ್ದೆಲ್ಲಾ ಬರಲಿ ಗೋವಿಂದನ ದಯೆಯೊಂದಿರಲಿ” ಎಂಬಂತೆ ಸ್ವೀಕರಿಸಿದರೆ ಬದುಕಿನಲ್ಲಿ ಖಂಡಿತವಾಗಿಯೂ ಸಿಹಿಯಿರುತ್ತದೆ, ತಿಂದು ಹಂಚುವಷ್ಟು.

ಇತ್ತೀಚಿನ ಸುದ್ದಿ

ಜಾಹೀರಾತು