10:35 PM Thursday19 - June 2025
ಬ್ರೇಕಿಂಗ್ ನ್ಯೂಸ್
Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ…

ಇತ್ತೀಚಿನ ಸುದ್ದಿ

ಚಿಪ್ಪು ಹಂದಿಗೆ ಜೀವದಾನ: ಬೊಮ್ಮರಬೆಟ್ಟಿನಲ್ಲಿ 50 ಅಡಿ ಬಾವಿಯಿಂದ ರಕ್ಷಣೆ

19/06/2025, 22:35

ಹಿರಿಯಡ್ಕ(reporterkarnataka.com): ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ ಗುರುವಾರ ಸಂಜೆ 50 ಅಡಿ ಆಳದ ಬಾವಿಗೆ ಬಿದ್ದುಬಿಟ್ಟಿದ್ದ ಅಪರೂಪದ ಚಿಪ್ಪು ಹಂದಿ ಅನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್ ಹಿರಿಯಡ್ಕ ಅವರು ತಕ್ಷಣವೇ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರಿಗೆ ವಿಷಯ ತಿಳಿಸಿದರು.
*ಸ್ಪಂದನೆ ತಕ್ಷಣ:* ಕುಲಾಲ್ ಅವರು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕರೆದೊಯ್ದರು.
ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ, ನೀರೆಯ ಸುನಿಲ್ ಎಂಬವರು ಬಾವಿಗೆ ಇಳಿದು 20 ಅಡಿ ಆಳದಲ್ಲಿದ್ದ ಚಿಪ್ಪು ಹಂದಿಯನ್ನು ಹಿಡಿದು ಮೇಲಕ್ಕೆತ್ತಿದರು.
ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ವೀರೆಶ್, ಅರಣ್ಯ ರಕ್ಷಕರು ಪ್ರವೀಣ್, ಶ್ರೀಧರ್ ನರೇಗಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಅನಂತರ, ಚಿಪ್ಪು ಹಂದಿಯನ್ನು ಸುಸ್ಥಿತಿಯಲ್ಲಿ ಹಿಡಿದು, ಬಯಲು ಪ್ರದೇಶದ ರಕ್ಷಿತ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿಲಾಯಿತು.
ಚಿಪ್ಪು ಹಂದಿ (European Hedgehog) ಒಂದು ಸಸ್ತನಿಯ ಆಗಿದ್ದು, ಮಣ್ಣು ಮತ್ತು ಮರದ ಪೊತರೆಗಳಲ್ಲಿ ವಾಸವಿದ್ದು, ಇರುವೆ ಮತ್ತು ಗೆದ್ದಲುಗಳನ್ನು ಆಹಾರವನ್ನಾಗಿಸಿಕೊಂಡು ಬದುಕುತ್ತದೆ. ಇದು ಏಶ್ಯಾ ಮತ್ತು ಯುರೋಪ್ ಖಂಡದಲ್ಲಿ ಕಂಡುಬರುವ ಅಪರೂಪದ ಪ್ರಾಣಿ.

ಇತ್ತೀಚಿನ ಸುದ್ದಿ

ಜಾಹೀರಾತು