5:40 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

ಚಿಪ್ಪು ಹಂದಿಗೆ ಜೀವದಾನ: ಬೊಮ್ಮರಬೆಟ್ಟಿನಲ್ಲಿ 50 ಅಡಿ ಬಾವಿಯಿಂದ ರಕ್ಷಣೆ

19/06/2025, 22:35

ಹಿರಿಯಡ್ಕ(reporterkarnataka.com): ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ ಗುರುವಾರ ಸಂಜೆ 50 ಅಡಿ ಆಳದ ಬಾವಿಗೆ ಬಿದ್ದುಬಿಟ್ಟಿದ್ದ ಅಪರೂಪದ ಚಿಪ್ಪು ಹಂದಿ ಅನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್ ಹಿರಿಯಡ್ಕ ಅವರು ತಕ್ಷಣವೇ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರಿಗೆ ವಿಷಯ ತಿಳಿಸಿದರು.
*ಸ್ಪಂದನೆ ತಕ್ಷಣ:* ಕುಲಾಲ್ ಅವರು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕರೆದೊಯ್ದರು.
ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ, ನೀರೆಯ ಸುನಿಲ್ ಎಂಬವರು ಬಾವಿಗೆ ಇಳಿದು 20 ಅಡಿ ಆಳದಲ್ಲಿದ್ದ ಚಿಪ್ಪು ಹಂದಿಯನ್ನು ಹಿಡಿದು ಮೇಲಕ್ಕೆತ್ತಿದರು.
ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ವೀರೆಶ್, ಅರಣ್ಯ ರಕ್ಷಕರು ಪ್ರವೀಣ್, ಶ್ರೀಧರ್ ನರೇಗಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಅನಂತರ, ಚಿಪ್ಪು ಹಂದಿಯನ್ನು ಸುಸ್ಥಿತಿಯಲ್ಲಿ ಹಿಡಿದು, ಬಯಲು ಪ್ರದೇಶದ ರಕ್ಷಿತ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿಲಾಯಿತು.
ಚಿಪ್ಪು ಹಂದಿ (European Hedgehog) ಒಂದು ಸಸ್ತನಿಯ ಆಗಿದ್ದು, ಮಣ್ಣು ಮತ್ತು ಮರದ ಪೊತರೆಗಳಲ್ಲಿ ವಾಸವಿದ್ದು, ಇರುವೆ ಮತ್ತು ಗೆದ್ದಲುಗಳನ್ನು ಆಹಾರವನ್ನಾಗಿಸಿಕೊಂಡು ಬದುಕುತ್ತದೆ. ಇದು ಏಶ್ಯಾ ಮತ್ತು ಯುರೋಪ್ ಖಂಡದಲ್ಲಿ ಕಂಡುಬರುವ ಅಪರೂಪದ ಪ್ರಾಣಿ.

ಇತ್ತೀಚಿನ ಸುದ್ದಿ

ಜಾಹೀರಾತು