12:05 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಜೆಡಿಎಸ್ ಗೆ 3 ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಚಿಂತನೆ; ಗೌಡ್ರು ಒಪ್ಪಿಕೊಂಡ್ರೆ ಒಂದೆರಡು ದಿನಗಳಲ್ಲಿ ಸಖ್ಯ ಪಕ್ಕಾ

05/10/2023, 10:25

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಎಲ್ಲವೂ ಅಂದುಕೊಂಡಂತೆ ನಡೆದರೆ ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೆರಡು ದಿನಗಳಲ್ಲಿ ಪಕ್ಕಾ ಆಗಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಮೈತ್ರಿ ಸೂತ್ರವನ್ನು ಬಿಜೆಪಿಯು ಜೆಡಿಎಸ್ ಮುಂದಿಟ್ಟಿದೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಈ ಮೈತ್ರಿ ಸೂತ್ರವನ್ನು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರ ಮುಂದಿಟ್ಟಿದ್ದಾರೆ. ದೇವೇಗೌಡರ ತವರು ಜಿಲ್ಲೆಯಾದ ಹಾಸನ ಲೋಕಸಭಾ ಕ್ಷೇತ್ರದ ಜತೆಗೆ ಮಂಡ್ಯ ಮತ್ತು ತುಮಕೂರು ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಬಿಜೆಪಿ ಸಿದ್ಧವಾಗಿದೆ. ಬಿಜೆಪಿಯ ಈ ಆಫರನ್ನು ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಒಪ್ಪಿಕೊಂಡರೆ ಒಂದೆರಡು ದಿನಗಳಲ್ಲಿ ಉಭಯ ಪಕ್ಷಗಳ ಮೈತ್ರಿಗೆ ಅಧಿಕೃತ ಮುದ್ರೆ ಬೀಳಲಿದೆ. ಕೇವಲ 3 ಕ್ಷೇತ್ರಗಳನ್ನು ಜೆಡಿಎಸ್ ಒಪ್ಪಿಕೊಳ್ಳದಿದ್ದರೆ, ಬಿಜೆಪಿಯು ಜೆಡಿಎಸ್ ಗೆ
ಜೆ.ಪಿ. ನಡ್ಡಾ, ಅಮಿತ್ ಷಾ ಅವರ ಜತೆ ಮತ್ತೊಂದು ಸುತ್ತಿನ ಮಾತುಕತೆಗೆ ಅವಕಾಶ ನೀಡಲಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಹಿನ್ನಡೆ ಕಂಡ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೆ ಈಗಾಗಲೇ ಜೆಡಿಎಸ್ ಸಿದ್ಧತೆಯಲ್ಲಿ ತೊಡಗಿದೆ. ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ದೇವೇಗೌಡರ ದೆಹಲಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿರುವುದರಿಂದ ಜೆಡಿಎಸ್ ಗೆ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲುವುದು ಕಷ್ಟಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯಾವುದೇ ತಕರಾರು ಮಾಡದೆ ಬಿಜೆಪಿ ನೀಡುವ 3 ಕ್ಷೇತ್ರಗಳನ್ನು ಒಪ್ಪಿಕೊಂಡು ಮೈತ್ರಿಗೆ ಅಂತಿಮ ಮುದ್ರೆಯೊತ್ತುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು