2:53 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಲಿಂಗ ಸಮಾನತೆಗೆ ಹೆಚ್ಚು ಒತ್ತು ಕೊಟ್ಟ ರಾಜ್ಯ ಕರ್ನಾಟಕ: ಸಚಿವ ಹಾಲಪ್ಪ ಬಸಪ್ಪ ಆಚಾರ್

04/11/2022, 00:47

ಬೆಂಗಳೂರು(reporterkarnataka.com) ಕರ್ನಾಟಕ ರಾಜ್ಯ ಮೊದಲಿನಿಂದಲೂ ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ. ಇಲ್ಲಿನ ಮಹಿಳೆಯರು ಇತಿಹಾಸದುದ್ದಕ್ಕೂ ಯಶಸ್ಸನ್ನು ಸಾಧಿಸುತ್ತ ಬಂದವರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅಭಿಪ್ರಾಯಪಟ್ಟರು.
ನಗರದ ಅರಮನೆ ಆವರಣದಲ್ಲಿ ನವೆಂಬರ್ 2ರಿಂದ ಶುರುವಾದ ಬಹುನಿರೀಕ್ಷಿತ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವು ಅದ್ಧೂರಿಯಾಗಿ ನಡೆಯಿತು. ಸಮಾವೇಶದ ಎರಡನೇ ದಿನದಂದು (ನವೆಂಬರ್ 3,2022)ಆಯೋಜಿಸಲಾದ “ADVANCING GENDER DIVERSITY: JOURNEY POST SHATTERING THE GLASS CEILING” ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


‘ಜಾಗತಿಕ ಹೂಡಿಕೆದಾರರ ಸಮಾವೇಶ – 2022ʼರಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು ʼಮಹಿಳಾ ಉದ್ದಿಮೆದಾರರು ಹಾಗೂ ಹಾಗೂ ಬೇರೆ ಬೇರೆ ವೃತ್ತಿಗಳಲ್ಲಿ ನಿರತವಾಗಿರುವ ಮಹಿಳೆಯರಿಗೆ ನಿರಂತರವಾಗಿ ಬೆಂಬಲ ಸಿಗುತ್ತಿದೆ. ಆದರೆ ಮಹಿಳಾ ನೇತೃತ್ವದ ಉದ್ಯಮಗಳ ಉಳಿವಿಗಾಗಿ ಬಂಡವಾಳ ಹಾಗೂ ಮಾರುಕಟ್ಟೆ ಒದಗಿಸುವ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಿದೆ. ಮಹಿಳೆಯರನ್ನು ಅನೌಪಚಾರಿಕ ವಲಯದಿಂದ ಹೊರತರಲು ಹಾಗೂ ಸುಸ್ಥಿರವಾದ ಮಹಿಳಾ ಕೇಂದ್ರಿತ MSME ವಲಯವನ್ನು ನಿರ್ಮಾಣ ಮಾಡುವ ದೃಷ್ಟಿಯಿಂದ ಆಧುನಿಕ ವಲಯಗಳಲ್ಲಿ ಕೌಶಲ್ಯ ಹಾಗೂ ಉದ್ಯಮಶೀಲತೆಯನ್ನು ಹೆಚ್ಚಿಸುವ ಅಗತ್ಯವಿದೆ. ಈಗಾಗಲೇ ತಮ್ಮ ಸಾಧನೆಯ ಮೂಲಕ ಕರ್ನಾಟಕ ಹಾಗೂ ದೇಶಕ್ಕೆ ಹೆಮ್ಮೆ ತಂದ ಎಲ್ಲ ಮಹಿಳಾ ಸಾಧಕರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆʼ ಎಂದು ಅವರು ಹೇಳಿದರು.
ಮೂರು ದಿನಗಳ ಅವಧಿಯ ಈ ಸಮಾವೇಶದಲ್ಲಿ ರಾಷ್ಟ್ರ ಹಾಗೂ ಜಾಗತಿಕ ಮಟ್ಟದ ಪ್ರಮುಖ ಕೈಗಾರಿಕೋದ್ಯಮಿಗಳು, ಜಾಗತಿಕ ಮಟ್ಟದ ಭಾಷಣಕಾರರು, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕೈಗಾರಿಕಾ ಹಾಗೂ ವ್ಯಾಪಾರ ಸಂಘ ಸಂಸ್ಥೆಗಳು ಭಾಗವಹಿಸಿವೆ. ಹಾಗೇ ಸಮಾವೇಶದಲ್ಲಿ ಹಲವಾರು ಪ್ರಚಲಿತ ವಿಷಯಗಳ ಬಗ್ಗೆ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು