11:39 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಲಿಂಗಸಗೂರು: ಚಿತ್ತಾಪೂರ ಗ್ರಾಮಕ್ಕೆ ಕೃಷ್ಣಾ ನದಿ ನೀರು ಕುಡಿಯಲು ಒದಗಿಸಲು ಅಂಬೇಡ್ಕರ್ ಸೇನೆ ಒತ್ತಾಯ

06/05/2025, 21:32

ಶಿವು ರಾಠೋಡ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು.
ಎಂದು ಸಹಾಯಕ ಆಯುಕ್ತರಿಗೆ ಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದರು ಇಡಿ ಕರ್ನಾಟಕ ತುಂಬ ಮಾಧ್ಯಮಗಳಲಿಯು ಸಹ ಪ್ರಸಾರವಾಗಿತ್ತು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಭೇಟಿ ಮಾಡಿದರು. ಆರೋಗ್ಯ ಇಲಾಖೆಯವರು ಬೋರ್ ನೀರು ಕುಡಿಯಲು ಯೋಗ್ಯವಿಲ್ಲದ ನೀರು ಬಳಸಿದರಿಂದ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಚಿತ್ತಾಪೂರ ಗ್ರಾಮಸ್ಥರಿಗೆ ಈ ಬೋರವೇಲ್ ನೀರು ಕುಡಿಯುವುದರಿಂದ ಜನರಿಗೆ ಸಾಕಷ್ಟು ಅನಾರೋಗ್ಯದ ಸಮಸ್ಯೆ ಮಂಡಿನೋವು, ಮುಂತಾದ ಸಮಸ್ಯೆಗಳು ಉಂಟಾಗಿವೆ. ಒಂದು ವರ್ಷ ಕಳೆದರು ಸಹ ಗ್ರಾಮಸ್ಥರಿಗೆ ಇನ್ನೂ ಬೋರವೇಲ್ ನೀರು ಕುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಗ್ರಹಿಸಿದರು.
ಜೆಜೆಎಂ ಮೂಲಕ ಕೊರೆದ ಬೋರವೇಲ್ ನೀರು ಸಹ ಯೋಗ್ಯವಿಲ್ಲ ಕಾಮಗಾರಿಯು ಕಳಪೆಯಾಗಿದ್ದು ಗ್ರಾಮದಲ್ಲಿ ಎಲ್ಲಿ ಅಂದರಲ್ಲಿ ಪೈಪ್ ಲೈನ್ ಹೊಡೆದು ನೀರು ಪೋಲ್ ಆಗುತ್ತಿವೆ. ಗುತ್ತಿಗೆದಾರರು ಕಳಪೆ ಸಾಮಗ್ರಿಗಳನ್ನು ಬಳಸಿದ್ರಿಂದ ನೀರು ಪೋಲಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ತಾಲೂಕು ಅಧ್ಯಕ್ಷ ಗದ್ಯಪ್ಪ ಚಿತ್ತಾಪುರ.
ಅನಿಲ್ ಕುಮಾರ್. ಅಮರೇಶ ಆನೇಹೂಸೂರು ಮತ್ತರರು ಇದರು.

ಇತ್ತೀಚಿನ ಸುದ್ದಿ

ಜಾಹೀರಾತು