9:08 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಲಿಂಗಸಗೂರು: ಚಿತ್ತಾಪೂರ ಗ್ರಾಮಕ್ಕೆ ಕೃಷ್ಣಾ ನದಿ ನೀರು ಕುಡಿಯಲು ಒದಗಿಸಲು ಅಂಬೇಡ್ಕರ್ ಸೇನೆ ಒತ್ತಾಯ

06/05/2025, 21:32

ಶಿವು ರಾಠೋಡ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು.
ಎಂದು ಸಹಾಯಕ ಆಯುಕ್ತರಿಗೆ ಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದರು ಇಡಿ ಕರ್ನಾಟಕ ತುಂಬ ಮಾಧ್ಯಮಗಳಲಿಯು ಸಹ ಪ್ರಸಾರವಾಗಿತ್ತು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಭೇಟಿ ಮಾಡಿದರು. ಆರೋಗ್ಯ ಇಲಾಖೆಯವರು ಬೋರ್ ನೀರು ಕುಡಿಯಲು ಯೋಗ್ಯವಿಲ್ಲದ ನೀರು ಬಳಸಿದರಿಂದ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಚಿತ್ತಾಪೂರ ಗ್ರಾಮಸ್ಥರಿಗೆ ಈ ಬೋರವೇಲ್ ನೀರು ಕುಡಿಯುವುದರಿಂದ ಜನರಿಗೆ ಸಾಕಷ್ಟು ಅನಾರೋಗ್ಯದ ಸಮಸ್ಯೆ ಮಂಡಿನೋವು, ಮುಂತಾದ ಸಮಸ್ಯೆಗಳು ಉಂಟಾಗಿವೆ. ಒಂದು ವರ್ಷ ಕಳೆದರು ಸಹ ಗ್ರಾಮಸ್ಥರಿಗೆ ಇನ್ನೂ ಬೋರವೇಲ್ ನೀರು ಕುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಗ್ರಹಿಸಿದರು.
ಜೆಜೆಎಂ ಮೂಲಕ ಕೊರೆದ ಬೋರವೇಲ್ ನೀರು ಸಹ ಯೋಗ್ಯವಿಲ್ಲ ಕಾಮಗಾರಿಯು ಕಳಪೆಯಾಗಿದ್ದು ಗ್ರಾಮದಲ್ಲಿ ಎಲ್ಲಿ ಅಂದರಲ್ಲಿ ಪೈಪ್ ಲೈನ್ ಹೊಡೆದು ನೀರು ಪೋಲ್ ಆಗುತ್ತಿವೆ. ಗುತ್ತಿಗೆದಾರರು ಕಳಪೆ ಸಾಮಗ್ರಿಗಳನ್ನು ಬಳಸಿದ್ರಿಂದ ನೀರು ಪೋಲಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ತಾಲೂಕು ಅಧ್ಯಕ್ಷ ಗದ್ಯಪ್ಪ ಚಿತ್ತಾಪುರ.
ಅನಿಲ್ ಕುಮಾರ್. ಅಮರೇಶ ಆನೇಹೂಸೂರು ಮತ್ತರರು ಇದರು.

ಇತ್ತೀಚಿನ ಸುದ್ದಿ

ಜಾಹೀರಾತು