5:52 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಲಿಂಗಸಗೂರು: ಚಿತ್ತಾಪೂರ ಗ್ರಾಮಕ್ಕೆ ಕೃಷ್ಣಾ ನದಿ ನೀರು ಕುಡಿಯಲು ಒದಗಿಸಲು ಅಂಬೇಡ್ಕರ್ ಸೇನೆ ಒತ್ತಾಯ

06/05/2025, 21:32

ಶಿವು ರಾಠೋಡ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು.
ಎಂದು ಸಹಾಯಕ ಆಯುಕ್ತರಿಗೆ ಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದರು ಇಡಿ ಕರ್ನಾಟಕ ತುಂಬ ಮಾಧ್ಯಮಗಳಲಿಯು ಸಹ ಪ್ರಸಾರವಾಗಿತ್ತು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಭೇಟಿ ಮಾಡಿದರು. ಆರೋಗ್ಯ ಇಲಾಖೆಯವರು ಬೋರ್ ನೀರು ಕುಡಿಯಲು ಯೋಗ್ಯವಿಲ್ಲದ ನೀರು ಬಳಸಿದರಿಂದ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಚಿತ್ತಾಪೂರ ಗ್ರಾಮಸ್ಥರಿಗೆ ಈ ಬೋರವೇಲ್ ನೀರು ಕುಡಿಯುವುದರಿಂದ ಜನರಿಗೆ ಸಾಕಷ್ಟು ಅನಾರೋಗ್ಯದ ಸಮಸ್ಯೆ ಮಂಡಿನೋವು, ಮುಂತಾದ ಸಮಸ್ಯೆಗಳು ಉಂಟಾಗಿವೆ. ಒಂದು ವರ್ಷ ಕಳೆದರು ಸಹ ಗ್ರಾಮಸ್ಥರಿಗೆ ಇನ್ನೂ ಬೋರವೇಲ್ ನೀರು ಕುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಗ್ರಹಿಸಿದರು.
ಜೆಜೆಎಂ ಮೂಲಕ ಕೊರೆದ ಬೋರವೇಲ್ ನೀರು ಸಹ ಯೋಗ್ಯವಿಲ್ಲ ಕಾಮಗಾರಿಯು ಕಳಪೆಯಾಗಿದ್ದು ಗ್ರಾಮದಲ್ಲಿ ಎಲ್ಲಿ ಅಂದರಲ್ಲಿ ಪೈಪ್ ಲೈನ್ ಹೊಡೆದು ನೀರು ಪೋಲ್ ಆಗುತ್ತಿವೆ. ಗುತ್ತಿಗೆದಾರರು ಕಳಪೆ ಸಾಮಗ್ರಿಗಳನ್ನು ಬಳಸಿದ್ರಿಂದ ನೀರು ಪೋಲಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ತಾಲೂಕು ಅಧ್ಯಕ್ಷ ಗದ್ಯಪ್ಪ ಚಿತ್ತಾಪುರ.
ಅನಿಲ್ ಕುಮಾರ್. ಅಮರೇಶ ಆನೇಹೂಸೂರು ಮತ್ತರರು ಇದರು.

ಇತ್ತೀಚಿನ ಸುದ್ದಿ

ಜಾಹೀರಾತು