10:10 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ಕಂದಾಯ ದಿನಾಚರಣೆಯಲ್ಲಿ ಹಸಿರೋತ್ಸವ ಸಂಭ್ರಮ

02/07/2021, 17:44

ಅಮರೇಶ್ ಲಿಂಗಸುಗೂರು

info.reporterkarnataka@gmail.com

ಲಿಂಗಸೂಗುರು ಮಿನಿ ವಿಧಾನಸೌಧದಲ್ಲಿ ತಾಲೂಕು ಕಂದಾಯ ಇಲಾಖೆ ವತಿಯಿಂದ ಕಂದಾಯ ದಿನಾಚರಣೆ 2021ನ್ನು ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಈ ಬಾರಿ ವಿಶೇಷವಾಗಿ ‘ಹಸಿರೋತ್ಸವ’ ಎಂಬ ಧ್ಯೇಯ ವಾಕ್ಯದ ಸಂಕಲ್ಪದೊಂದಿಗೆ ಸಸಿ ನೆಟ್ಟು ನೀರು ಹಾಕುವ ಮೂಲಕ ಅರ್ಥ ಆಚರಿಸಲಾಯಿತು. 

ಕಾರ್ಯಕ್ರಮವನ್ನು ಉದ್ದೇಶಿಸಿ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಮಾತನಾಡಿ,ಕಂದಾಯ ಇಲಾಖೆ ಅಂತ ಹೆಸರು ಬರೊದಕ್ಕೆ ಮೂಲ ಕಾರಣ ಇಲಾಖೆಯಿಂದ ಆದಾಯ ಬರುತ್ತಿತ್ತು. ಹಾಗಾಗಿ ಕಂದಾಯ ಇಲಾಖೆ ಅಂತ ಕರೆದರು. ಆದರೆ ಅದು ಇಂದು ಮಹತ್ವವನ್ನು ಕಳೆದುಕೊಂಡಿದೆ ಎಂದು ಹೇಳಿದರು. ಕಾರ್ಯಕ್ರಮದ ಕುರಿತು ತಹಶೀಲ್ದಾರ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಲಿಂಗಸೂಗೂರು ಉಪವಿಭಾಗದ ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್ ಚಾಮರಾಜ ಪಾಟೀಲ್, ಗ್ರೆಡ್ 2 ತಹಶೀಲ್ದಾರ್ ಬಿ.ಜಿ.ಜಳಕಿಮಠ, ಗುರುಗುಂಟಾ ಉಪ ತಹಶೀಲ್ದಾರ್ ರಂಗಪ್ಪ ನಾಯಕ ,ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ರಾಮಕೃಷ್ಣ, ಕಂದಾಯ ನಿರೀಕ್ಷಕರಾದ ರಾಘವೇಂದ್ರ ಗ್ರಾಮ ಲೆಕ್ಕಾಧಿಕಾರಿ ಗಳ ಸಂಘದ ತಾಲ್ಲೂಕು ಅಧ್ಯಕ್ಷ ಅಮರೇಶ ರಾಠೋಡ್  ಸೇರಿದಂತೆ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು