12:50 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಲಿಂಗಸುಗೂರು ಪುರಸಭೆ ಆಡಳಿತದ ನಿರ್ಲಕ್ಷ್ಯ: 7 ತಿಂಗಳು ಕಳೆದರೂ ವಿದ್ಯಾರ್ಥಿನಿಯರಿಗೆ ಮಂಜೂರಾಗದ ವ್ಯಾಸಂಗ ವೇತನ

11/07/2021, 08:44

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೋವಿಡ್ ನಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದು, ಪೋಷಕರಿಗೆ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ಒಂದೇ ಸಲ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿವೆ. ಆದರೆ ಲಿಂಗಸಗೂರು ಪುರಸಭೆಯ ಎಸ್ ಸಿಪಿ- ಟಿಎಸ್ ಪಿ ಯೋಜನೆಯಡಿ ನೀಡಬೇಕಾಗಿದ್ದ ವಿದ್ಯಾರ್ಥಿ ವೇತನವನ್ನು ಇನ್ನೂ ಪಾವತಿಸದೆ ನಿರ್ಲಕ್ಷ್ಯ ವಹಿಸಿದೆ.

2021ರ ಜನವರಿ 15ರಂದು 2020- 21ನೇ ಸಾಲಿನ ಅನುದಾನದಲ್ಲಿ ವಿವಿಧ ಹಂತದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ವಿಶೇಷ ನೆರವಿನ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಸುಮಾರು 7 ತಿಂಗಳುಗಳು ಕಳೆದರೂ ಅರ್ಜಿ ಸಲ್ಲಿಸಿದ ವಿದ್ಯಾರ್ಥಿನಿಯರಿಗೆ ಇನ್ನೂ ವ್ಯಾಸಂಗ ವೇತನ ಪಾವತಿ ಆಗಿರುವುದಿಲ್ಲ. ಇದಕ್ಕೆ ಯಾರು ಹೊಣೆ.? ಆದಷ್ಟು ಬೇಗನೆ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳು ವಿದ್ಯಾರ್ಥಿನಿಯರಿಗೆ ವೇತನ ಮಂಜೂರು ಮಾಡಲು ಮುಂದಾಗುತ್ತಾರಾ? ಕಾದು ನೋಡಬೇಕಾಗಿದೆ?

ಇತ್ತೀಚಿನ ಸುದ್ದಿ

ಜಾಹೀರಾತು