6:15 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಲಿಂಗಸುಗೂರು ಪುರಸಭೆ ಆಡಳಿತದ ನಿರ್ಲಕ್ಷ್ಯ: 7 ತಿಂಗಳು ಕಳೆದರೂ ವಿದ್ಯಾರ್ಥಿನಿಯರಿಗೆ ಮಂಜೂರಾಗದ ವ್ಯಾಸಂಗ ವೇತನ

11/07/2021, 08:44

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೋವಿಡ್ ನಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದು, ಪೋಷಕರಿಗೆ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ಒಂದೇ ಸಲ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿವೆ. ಆದರೆ ಲಿಂಗಸಗೂರು ಪುರಸಭೆಯ ಎಸ್ ಸಿಪಿ- ಟಿಎಸ್ ಪಿ ಯೋಜನೆಯಡಿ ನೀಡಬೇಕಾಗಿದ್ದ ವಿದ್ಯಾರ್ಥಿ ವೇತನವನ್ನು ಇನ್ನೂ ಪಾವತಿಸದೆ ನಿರ್ಲಕ್ಷ್ಯ ವಹಿಸಿದೆ.

2021ರ ಜನವರಿ 15ರಂದು 2020- 21ನೇ ಸಾಲಿನ ಅನುದಾನದಲ್ಲಿ ವಿವಿಧ ಹಂತದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ವಿಶೇಷ ನೆರವಿನ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಸುಮಾರು 7 ತಿಂಗಳುಗಳು ಕಳೆದರೂ ಅರ್ಜಿ ಸಲ್ಲಿಸಿದ ವಿದ್ಯಾರ್ಥಿನಿಯರಿಗೆ ಇನ್ನೂ ವ್ಯಾಸಂಗ ವೇತನ ಪಾವತಿ ಆಗಿರುವುದಿಲ್ಲ. ಇದಕ್ಕೆ ಯಾರು ಹೊಣೆ.? ಆದಷ್ಟು ಬೇಗನೆ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳು ವಿದ್ಯಾರ್ಥಿನಿಯರಿಗೆ ವೇತನ ಮಂಜೂರು ಮಾಡಲು ಮುಂದಾಗುತ್ತಾರಾ? ಕಾದು ನೋಡಬೇಕಾಗಿದೆ?

ಇತ್ತೀಚಿನ ಸುದ್ದಿ

ಜಾಹೀರಾತು