11:05 AM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಲಿಂಗಸುಗೂರು: ಸಮಾಜ ಕಲ್ಯಾಣ ಇಲಾಖೆ  ಹೊರಗುತ್ತಿಗೆ ಕಾರ್ಮಿಕರಿಗೆ 9 ತಿಂಗಳಿನಿಂದ ಸಂಬಳ ಇಲ್ಲ!

20/04/2022, 20:07

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka.com

ಒಂದು ತಿಂಗಳು ಸಂಬಳವಾಗದಿದ್ದರೆ ಈ ದುಬಾರಿ ಕಾಲದಲ್ಲಿ ಬದುಕುವುದು ಕಷ್ಟ. ಹಾಗಾದರೆ 9 ತಿಂಗಳಿನಿಂದ ವೇತನ ಕೊಡದಿದ್ದರೆ, ಆ ಕಾರ್ಮಿಕರು ಹೇಗೆ ಬದುಕು ನಡೆಸಬೇಕು? ಇಂತಹದ್ದೊಂದು ಭಯಾನಕ ವಾಸ್ತವ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ.

ಲಿಂಗಸುಗೂರು ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ವಸತಿ ನಿಲಯದ ಹೊರಗುತ್ತಿಗೆ ಕಾರ್ಮಿಕರಿಗೆ  9 ತಿಂಗಳಿನ ವೇತನ ನೀಡದೆ ಸತಾಯಿಸಲಾಗುತ್ತಿದೆ.ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಎಆರ್ ಸಿ ಗುತ್ತಿಗೆದಾರರು ನಿರ್ಲಕ್ಷದಿಂದ ವಸತಿ ನಿಲಯದ ಕಾರ್ಮಿಕರು ಬೇಸತ್ತು ಪಟ್ಟಣದ ಸಮಾಜ ಕಲ್ಯಾಣ ಕಾರ್ಯಾಲಯ ಮುಂದೆ ವೇತನಕ್ಕಾಗಿ ಪ್ರತಿಭಟನೆ ನಡೆಸಿದರು. ನಂತರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬರುವ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಸುಮಾರು 9 ತಿಂಗಳಿಂದ ವೇತನ ನೀಡಿರುವುದಿಲ್ಲ. ನಮ್ಮ ಕುಟುಂಬ ನಿರ್ವಹಣೆ ಮತ್ತು ನಮ್ಮ ಜೀವನ ತೀರಾ ಕಷ್ಟಕರವಾಗಿರುತ್ತದೆ. 6 ದಿನಗಳೋಳಗಾಗಿ ನಮಗೆ ವೇತನವನ್ನು ನೀಡಬೇಕು. ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು. ಒಂದು ವೇಳೆ ನಮ್ಮ ವೇತನ ನೀಡುವ ವಿಚಾರದಲ್ಲಿ ನಿರ್ಲಕ್ಷ ವಹಿಸಿದರೆ ನಾವುಗಳು ಎಲ್ಲಾ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರು ಇಲಾಖೆಯ ಮುಂದುಗಡೆ ಅನಿರ್ದಿಷ್ಟವಧಿಯ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕ ಅಧ್ಯಕ್ಷ ದೇವೇಂದ್ರಪ್ಪ ಪಂಜಲರ್, ಚಿನ್ನಪ್ಪ, ಹನುಮರೆಡ್ಡಿ, ಗೌರಮ್ಮ, ರೇಣುಕಮ್ಮ, ಬಸಮ್ಮ, ಕಮಲಬಾಯಿ, ಶಿವಮ್ಮ, ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು