12:48 PM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಲಿಂಗಸುಗೂರು: ಸಮಾಜ ಕಲ್ಯಾಣ ಇಲಾಖೆ  ಹೊರಗುತ್ತಿಗೆ ಕಾರ್ಮಿಕರಿಗೆ 9 ತಿಂಗಳಿನಿಂದ ಸಂಬಳ ಇಲ್ಲ!

20/04/2022, 20:07

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka.com

ಒಂದು ತಿಂಗಳು ಸಂಬಳವಾಗದಿದ್ದರೆ ಈ ದುಬಾರಿ ಕಾಲದಲ್ಲಿ ಬದುಕುವುದು ಕಷ್ಟ. ಹಾಗಾದರೆ 9 ತಿಂಗಳಿನಿಂದ ವೇತನ ಕೊಡದಿದ್ದರೆ, ಆ ಕಾರ್ಮಿಕರು ಹೇಗೆ ಬದುಕು ನಡೆಸಬೇಕು? ಇಂತಹದ್ದೊಂದು ಭಯಾನಕ ವಾಸ್ತವ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ.

ಲಿಂಗಸುಗೂರು ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ವಸತಿ ನಿಲಯದ ಹೊರಗುತ್ತಿಗೆ ಕಾರ್ಮಿಕರಿಗೆ  9 ತಿಂಗಳಿನ ವೇತನ ನೀಡದೆ ಸತಾಯಿಸಲಾಗುತ್ತಿದೆ.ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಎಆರ್ ಸಿ ಗುತ್ತಿಗೆದಾರರು ನಿರ್ಲಕ್ಷದಿಂದ ವಸತಿ ನಿಲಯದ ಕಾರ್ಮಿಕರು ಬೇಸತ್ತು ಪಟ್ಟಣದ ಸಮಾಜ ಕಲ್ಯಾಣ ಕಾರ್ಯಾಲಯ ಮುಂದೆ ವೇತನಕ್ಕಾಗಿ ಪ್ರತಿಭಟನೆ ನಡೆಸಿದರು. ನಂತರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬರುವ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಸುಮಾರು 9 ತಿಂಗಳಿಂದ ವೇತನ ನೀಡಿರುವುದಿಲ್ಲ. ನಮ್ಮ ಕುಟುಂಬ ನಿರ್ವಹಣೆ ಮತ್ತು ನಮ್ಮ ಜೀವನ ತೀರಾ ಕಷ್ಟಕರವಾಗಿರುತ್ತದೆ. 6 ದಿನಗಳೋಳಗಾಗಿ ನಮಗೆ ವೇತನವನ್ನು ನೀಡಬೇಕು. ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು. ಒಂದು ವೇಳೆ ನಮ್ಮ ವೇತನ ನೀಡುವ ವಿಚಾರದಲ್ಲಿ ನಿರ್ಲಕ್ಷ ವಹಿಸಿದರೆ ನಾವುಗಳು ಎಲ್ಲಾ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರು ಇಲಾಖೆಯ ಮುಂದುಗಡೆ ಅನಿರ್ದಿಷ್ಟವಧಿಯ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕ ಅಧ್ಯಕ್ಷ ದೇವೇಂದ್ರಪ್ಪ ಪಂಜಲರ್, ಚಿನ್ನಪ್ಪ, ಹನುಮರೆಡ್ಡಿ, ಗೌರಮ್ಮ, ರೇಣುಕಮ್ಮ, ಬಸಮ್ಮ, ಕಮಲಬಾಯಿ, ಶಿವಮ್ಮ, ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು