10:05 AM Friday28 - November 2025
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ…

ಇತ್ತೀಚಿನ ಸುದ್ದಿ

ಲಿಂಗಸಗೂರು: ಜಿಪಂ ಅನುದಾನದ ತುಂಡು ಗುತ್ತಿಗೆ ರದ್ದುಗೊಳಿಸಿ ಟೆಂಡರ್ ಕರೆಯಲು ಆಗ್ರಹ

30/12/2024, 20:27

ಅಮರೇಶ್ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲೂಕಿನ ಜಿಲ್ಲಾ ಪಂಚಾಯಿತಿ ಅನುದಾನ ಹಾಗೂ ಲಿಂಕ್ ಡಾಕುಮೆಂಟ್ ಅನುದಾನವನ್ನು ಪರ್ಸೇಂಟ ಮೇಲೆ ತುಂಡು ಗುತ್ತಿಗೆ ನೀಡಲಾಗುತ್ತಿದ್ದು, ಕೂಡಲೇ ಇದನ್ನು ರದ್ದುಗೊಳಿಸಿ ಟೆಂಡರ್ ಕರೆಯಬೇಕೆಂದು ಕರ್ನಾಟಕ ಬಹುಜನ ಚಳುವಳಿಯ ಅಮರೇಶ ಗೋಸಲೆ ಒತ್ತಾಯಿಸಿದ್ದಾರೆ.
ಅವರು ಮುಖ್ಯ ಕಾರ್ಯನಿರ್ವಾಹಕರು ರಾಯಚೂರು ಅವರಿಗೆ ಪತ್ರ ಬರೆದು ಲಿಂಗಸಗೂರು ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪವಿಭಾಗ ಲಿಂಗಸಗೂರು ಇವರು ಜಿಲ್ಲಾ ಪಂಚಾಯತ್ ಅನುದಾನ, ಹಾಗೂ ಲಿಂಕ್ ಡಾಕುಮೆಂಟ್ ಅನುದಾನದಲ್ಲಿ ದುರಸ್ತಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಯಾವುದೆ ಮಾಹಿತಿ ನೀಡದೆ ತಮಗೆ ಬೇಕಾದ ಗುತ್ತಿಗೆದಾರ ಅಥವ ಜನಪ್ರತಿನಿಧಿಗಳ ಗಮನಕ್ಕೆ ಮಾತ್ರ ತಂದು ಹೊಂದಾಣಿಕೆ ಮಾಡಿಕೊಂಡು ಒಂದು ಲಕ್ಷಕ್ಕೆ 6ರಿಂದ 7 ಪರ್ಸೆಂಟೇಜ್ ಪಡೆದು ಕಾಮಗಾರಿಗಳನ್ನು ನೀಡಿ ಅಗ್ರಿಮೆಂಟ್ ಮಾಡುತಿದ್ದಾರೆ. ಇದರಲ್ಲಿ ಕಾರ್ಯನಿರ್ವಾಹಕ ಅಭಿಯಂತರರು ಶಾಮಿಲಾಗಿ ತುಂಡುಗುತ್ತಿಗೆ ನೀಡಿ ಸರಕಾರದ ಹಣ ಲೂಟಿ ಮಾಡುವ ಉನ್ನಾರ ನಡೆಸಿದ್ದಾರೆ. ಗುತ್ತಿಗೆದಾರರು 6ರಿಂದ 7 ಪರ್ಸಂಟೇಜ್ ನಿಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆಯುವ ಗುತ್ತಿಗೆದಾರ ಅದೆಷ್ಟು ಗುಣಮಟ್ಟದ ಕಾಮಗಾರಿ ಮಾಡಬಲ್ಲ ಎನ್ನುವುದು ಮೇಲುನೋಟಕ್ಕೆ ಕಂಡುಬರುತ್ತಿದೆ. ಅದಕ್ಕಾಗಿ ತುಂಡುಗುತ್ತಿಗೆಯನ್ನು ರದ್ದುಗೊಳಿಸಬೇಕು ಟೆಂಡರ್ ಕರೆದು ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಅವರು ಒತ್ತಾಯಿಸಿ ಮನವಿ ಸಲ್ಲಿಸಿದಾರೆ.
ಈ ಸಂದರ್ಭದಲ್ಲಿ ಅಮರೇಶ ಗೋಸ್ಲೆ, ಅಮರೇಶ ಪವಾರ, ಶಿವಕುಮಾರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು