10:14 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಲಿಂಗಸಗೂರು: ಜಿಪಂ ಅನುದಾನದ ತುಂಡು ಗುತ್ತಿಗೆ ರದ್ದುಗೊಳಿಸಿ ಟೆಂಡರ್ ಕರೆಯಲು ಆಗ್ರಹ

30/12/2024, 20:27

ಅಮರೇಶ್ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲೂಕಿನ ಜಿಲ್ಲಾ ಪಂಚಾಯಿತಿ ಅನುದಾನ ಹಾಗೂ ಲಿಂಕ್ ಡಾಕುಮೆಂಟ್ ಅನುದಾನವನ್ನು ಪರ್ಸೇಂಟ ಮೇಲೆ ತುಂಡು ಗುತ್ತಿಗೆ ನೀಡಲಾಗುತ್ತಿದ್ದು, ಕೂಡಲೇ ಇದನ್ನು ರದ್ದುಗೊಳಿಸಿ ಟೆಂಡರ್ ಕರೆಯಬೇಕೆಂದು ಕರ್ನಾಟಕ ಬಹುಜನ ಚಳುವಳಿಯ ಅಮರೇಶ ಗೋಸಲೆ ಒತ್ತಾಯಿಸಿದ್ದಾರೆ.
ಅವರು ಮುಖ್ಯ ಕಾರ್ಯನಿರ್ವಾಹಕರು ರಾಯಚೂರು ಅವರಿಗೆ ಪತ್ರ ಬರೆದು ಲಿಂಗಸಗೂರು ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪವಿಭಾಗ ಲಿಂಗಸಗೂರು ಇವರು ಜಿಲ್ಲಾ ಪಂಚಾಯತ್ ಅನುದಾನ, ಹಾಗೂ ಲಿಂಕ್ ಡಾಕುಮೆಂಟ್ ಅನುದಾನದಲ್ಲಿ ದುರಸ್ತಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಯಾವುದೆ ಮಾಹಿತಿ ನೀಡದೆ ತಮಗೆ ಬೇಕಾದ ಗುತ್ತಿಗೆದಾರ ಅಥವ ಜನಪ್ರತಿನಿಧಿಗಳ ಗಮನಕ್ಕೆ ಮಾತ್ರ ತಂದು ಹೊಂದಾಣಿಕೆ ಮಾಡಿಕೊಂಡು ಒಂದು ಲಕ್ಷಕ್ಕೆ 6ರಿಂದ 7 ಪರ್ಸೆಂಟೇಜ್ ಪಡೆದು ಕಾಮಗಾರಿಗಳನ್ನು ನೀಡಿ ಅಗ್ರಿಮೆಂಟ್ ಮಾಡುತಿದ್ದಾರೆ. ಇದರಲ್ಲಿ ಕಾರ್ಯನಿರ್ವಾಹಕ ಅಭಿಯಂತರರು ಶಾಮಿಲಾಗಿ ತುಂಡುಗುತ್ತಿಗೆ ನೀಡಿ ಸರಕಾರದ ಹಣ ಲೂಟಿ ಮಾಡುವ ಉನ್ನಾರ ನಡೆಸಿದ್ದಾರೆ. ಗುತ್ತಿಗೆದಾರರು 6ರಿಂದ 7 ಪರ್ಸಂಟೇಜ್ ನಿಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆಯುವ ಗುತ್ತಿಗೆದಾರ ಅದೆಷ್ಟು ಗುಣಮಟ್ಟದ ಕಾಮಗಾರಿ ಮಾಡಬಲ್ಲ ಎನ್ನುವುದು ಮೇಲುನೋಟಕ್ಕೆ ಕಂಡುಬರುತ್ತಿದೆ. ಅದಕ್ಕಾಗಿ ತುಂಡುಗುತ್ತಿಗೆಯನ್ನು ರದ್ದುಗೊಳಿಸಬೇಕು ಟೆಂಡರ್ ಕರೆದು ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಅವರು ಒತ್ತಾಯಿಸಿ ಮನವಿ ಸಲ್ಲಿಸಿದಾರೆ.
ಈ ಸಂದರ್ಭದಲ್ಲಿ ಅಮರೇಶ ಗೋಸ್ಲೆ, ಅಮರೇಶ ಪವಾರ, ಶಿವಕುಮಾರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು