4:19 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

Literatur | ಶಿಕ್ಷಕಿ ಸುಧಾ ನಾಗೇಶರಿಗೆ ಸಾಧನಾ ಶ್ರೀ ಪ್ರಶಸ್ತಿ: ಫೆ. 14ರಂದು ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ಪ್ರದಾನ

12/02/2025, 13:53

ಬಂಟ್ವಾಳ(reporterkarnata.com): ಶ್ರೀನಿವಾಸ ಯುನಿವರ್ಸಿಟಿ ಮತ್ತು ಶ್ರೀನಿವಾಸ ಸಂಸ್ಥೆ ಮಂಗಳೂರಿನವರು ಎ. ಶ್ಯಾಮರಾವ್ ಸ್ಮರಣಾರ್ಥ ನೀಡುವ ಅತ್ಯುತ್ತಮ ಶಿಕ್ಷರಿಗೆ ನೀಡುವ‌ ಸಾಧನಾ ಶ್ರೀ -2025 ಪ್ರಶಸ್ತಿಗೆ ಪಾಣೆಮಂಗಳೂರು ಪ್ರೌಢಶಾಲೆಯ ಶಿಕ್ಷಕಿ ಸುಧಾ ನಾಗೇಶ್ ಆಯ್ಕೆಯಾಗಿದ್ದಾರೆ.

ಕಳೆದ 35 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಸಾಹಿತಿಯಾಗಿಯೂ ಗುರುತಿಸಲ್ಪಟ್ಟಿದ್ದಾರೆ.
ಮೂಡಲ ಮನೆ, ಹೃದಯರಾಗ, ಹೀಗೆ ಸುಮ್ಮನೆ, ಹನಿ, ಮಿನಿ‌ ಎನ್ ಸೈಕ್ಲೋಪೀಡಿಯ ಫಾರ್ ಸ್ಟೂಡೆಸ್,ಜೀನಿಯಸ್ ಮೊದಲಾದ ಎಂಟು ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ.
ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷೆಯಾಗಿರುವ ಇವರು ನೂರಾರು‌ ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದು ದುಬೈಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ. ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯೆಯಾಗಿದ್ದು ,”ಬೇಸಿಗೆಯ ತಾಪಕ್ಕೆ ಬಿಸಿಯೇರುತ್ತಿದೆ ಭೂಮಿ ” ಲೇಖನವು ಕೇರಳ ರಾಜ್ಯದ 6ನೇ ತರಗತಿಯ ಪಠ್ಯಪುಸ್ತಕವಾಗಿದೆ.
ಫೆ.14ರಂದು ಶ್ರೀನಿವಾಸ ಕಾಲೇಜು ಮುಕ್ಕದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು