3:32 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

Literatur | ಶಿಕ್ಷಕಿ ಸುಧಾ ನಾಗೇಶರಿಗೆ ಸಾಧನಾ ಶ್ರೀ ಪ್ರಶಸ್ತಿ: ಫೆ. 14ರಂದು ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ಪ್ರದಾನ

12/02/2025, 13:53

ಬಂಟ್ವಾಳ(reporterkarnata.com): ಶ್ರೀನಿವಾಸ ಯುನಿವರ್ಸಿಟಿ ಮತ್ತು ಶ್ರೀನಿವಾಸ ಸಂಸ್ಥೆ ಮಂಗಳೂರಿನವರು ಎ. ಶ್ಯಾಮರಾವ್ ಸ್ಮರಣಾರ್ಥ ನೀಡುವ ಅತ್ಯುತ್ತಮ ಶಿಕ್ಷರಿಗೆ ನೀಡುವ‌ ಸಾಧನಾ ಶ್ರೀ -2025 ಪ್ರಶಸ್ತಿಗೆ ಪಾಣೆಮಂಗಳೂರು ಪ್ರೌಢಶಾಲೆಯ ಶಿಕ್ಷಕಿ ಸುಧಾ ನಾಗೇಶ್ ಆಯ್ಕೆಯಾಗಿದ್ದಾರೆ.

ಕಳೆದ 35 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಸಾಹಿತಿಯಾಗಿಯೂ ಗುರುತಿಸಲ್ಪಟ್ಟಿದ್ದಾರೆ.
ಮೂಡಲ ಮನೆ, ಹೃದಯರಾಗ, ಹೀಗೆ ಸುಮ್ಮನೆ, ಹನಿ, ಮಿನಿ‌ ಎನ್ ಸೈಕ್ಲೋಪೀಡಿಯ ಫಾರ್ ಸ್ಟೂಡೆಸ್,ಜೀನಿಯಸ್ ಮೊದಲಾದ ಎಂಟು ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ.
ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷೆಯಾಗಿರುವ ಇವರು ನೂರಾರು‌ ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದು ದುಬೈಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ. ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯೆಯಾಗಿದ್ದು ,”ಬೇಸಿಗೆಯ ತಾಪಕ್ಕೆ ಬಿಸಿಯೇರುತ್ತಿದೆ ಭೂಮಿ ” ಲೇಖನವು ಕೇರಳ ರಾಜ್ಯದ 6ನೇ ತರಗತಿಯ ಪಠ್ಯಪುಸ್ತಕವಾಗಿದೆ.
ಫೆ.14ರಂದು ಶ್ರೀನಿವಾಸ ಕಾಲೇಜು ಮುಕ್ಕದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು