9:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎಲ್‍ಎಲ್‍ಬಿ ಪರೀಕ್ಷೆ: ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಡಿ.20ರಂದು ಹೈಕೋರ್ಟ್ ನಲ್ಲಿ ವಿಚಾರಣೆ

20/12/2021, 11:49

ಬೆಂಗಳೂರು(reporterkarnataka.com): ಐದು ವರ್ಷಗಳ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.20ರಂದು ವಿಚಾರಣೆಗೆ ಬರಲಿದೆ.  

ಐದು ವರ್ಷಗಳ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಕೆ.ಪಿ. ಪ್ರಭುದೇವ್ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠದಲ್ಲಿ ನಡೆಯಲಿದೆ. 

ಸಾಕಷ್ಟು ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗೆ ಹಾಜರಾಗಿಲ್ಲ. ತರಗತಿ ಆಲಿಸಲು ಲ್ಯಾಪ್‍ಟಾಪ್, ಡೆಸ್ಕ್‍ಟಾಪ್ ಮತ್ತು ಇಂಟರ್‍ನೆಟ್ ಸೇರಿ ಇತರೆ ಅಗತ್ಯ ಸೌಲಭ್ಯಗಳಿರಲಿಲ್ಲ. ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾದ ಶಿಕ್ಷಣ ದೊರೆತಿಲ್ಲ. ಇದೇ ಕಾರಣಕ್ಕೆ ಮೂರು ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರಿಕ್ಷೆ ನಡೆಸಲು ವಿವಿ ಹೊರಡಿಸಿದ್ದ ಅಧಿಸೂಚನೆಯನ್ನು ಧಾರವಾಡ ಹೈಕೋರ್ಟ್ ಪೀಠ ಡಿ.14ರಂದು ರದ್ದುಪಡಿಸಿದೆ.

ಇದೇ ರೀತಿ 5 ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆಯನ್ನು ಕೂಡ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು