10:01 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಎಲ್‍ಎಲ್‍ಬಿ ಪರೀಕ್ಷೆ: ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಡಿ.20ರಂದು ಹೈಕೋರ್ಟ್ ನಲ್ಲಿ ವಿಚಾರಣೆ

20/12/2021, 11:49

ಬೆಂಗಳೂರು(reporterkarnataka.com): ಐದು ವರ್ಷಗಳ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.20ರಂದು ವಿಚಾರಣೆಗೆ ಬರಲಿದೆ.  

ಐದು ವರ್ಷಗಳ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಕೆ.ಪಿ. ಪ್ರಭುದೇವ್ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠದಲ್ಲಿ ನಡೆಯಲಿದೆ. 

ಸಾಕಷ್ಟು ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗೆ ಹಾಜರಾಗಿಲ್ಲ. ತರಗತಿ ಆಲಿಸಲು ಲ್ಯಾಪ್‍ಟಾಪ್, ಡೆಸ್ಕ್‍ಟಾಪ್ ಮತ್ತು ಇಂಟರ್‍ನೆಟ್ ಸೇರಿ ಇತರೆ ಅಗತ್ಯ ಸೌಲಭ್ಯಗಳಿರಲಿಲ್ಲ. ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾದ ಶಿಕ್ಷಣ ದೊರೆತಿಲ್ಲ. ಇದೇ ಕಾರಣಕ್ಕೆ ಮೂರು ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರಿಕ್ಷೆ ನಡೆಸಲು ವಿವಿ ಹೊರಡಿಸಿದ್ದ ಅಧಿಸೂಚನೆಯನ್ನು ಧಾರವಾಡ ಹೈಕೋರ್ಟ್ ಪೀಠ ಡಿ.14ರಂದು ರದ್ದುಪಡಿಸಿದೆ.

ಇದೇ ರೀತಿ 5 ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆಯನ್ನು ಕೂಡ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು