7:43 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಎಲ್‍ಎಲ್‍ಬಿ ಪರೀಕ್ಷೆ: ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಡಿ.20ರಂದು ಹೈಕೋರ್ಟ್ ನಲ್ಲಿ ವಿಚಾರಣೆ

20/12/2021, 11:49

ಬೆಂಗಳೂರು(reporterkarnataka.com): ಐದು ವರ್ಷಗಳ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.20ರಂದು ವಿಚಾರಣೆಗೆ ಬರಲಿದೆ.  

ಐದು ವರ್ಷಗಳ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಕೆ.ಪಿ. ಪ್ರಭುದೇವ್ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠದಲ್ಲಿ ನಡೆಯಲಿದೆ. 

ಸಾಕಷ್ಟು ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗೆ ಹಾಜರಾಗಿಲ್ಲ. ತರಗತಿ ಆಲಿಸಲು ಲ್ಯಾಪ್‍ಟಾಪ್, ಡೆಸ್ಕ್‍ಟಾಪ್ ಮತ್ತು ಇಂಟರ್‍ನೆಟ್ ಸೇರಿ ಇತರೆ ಅಗತ್ಯ ಸೌಲಭ್ಯಗಳಿರಲಿಲ್ಲ. ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾದ ಶಿಕ್ಷಣ ದೊರೆತಿಲ್ಲ. ಇದೇ ಕಾರಣಕ್ಕೆ ಮೂರು ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರಿಕ್ಷೆ ನಡೆಸಲು ವಿವಿ ಹೊರಡಿಸಿದ್ದ ಅಧಿಸೂಚನೆಯನ್ನು ಧಾರವಾಡ ಹೈಕೋರ್ಟ್ ಪೀಠ ಡಿ.14ರಂದು ರದ್ದುಪಡಿಸಿದೆ.

ಇದೇ ರೀತಿ 5 ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆಯನ್ನು ಕೂಡ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು