1:29 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಎಲ್‍ಎಲ್‍ಬಿ ಪರೀಕ್ಷೆ: ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಡಿ.20ರಂದು ಹೈಕೋರ್ಟ್ ನಲ್ಲಿ ವಿಚಾರಣೆ

20/12/2021, 11:49

ಬೆಂಗಳೂರು(reporterkarnataka.com): ಐದು ವರ್ಷಗಳ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.20ರಂದು ವಿಚಾರಣೆಗೆ ಬರಲಿದೆ.  

ಐದು ವರ್ಷಗಳ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಕೆ.ಪಿ. ಪ್ರಭುದೇವ್ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠದಲ್ಲಿ ನಡೆಯಲಿದೆ. 

ಸಾಕಷ್ಟು ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗೆ ಹಾಜರಾಗಿಲ್ಲ. ತರಗತಿ ಆಲಿಸಲು ಲ್ಯಾಪ್‍ಟಾಪ್, ಡೆಸ್ಕ್‍ಟಾಪ್ ಮತ್ತು ಇಂಟರ್‍ನೆಟ್ ಸೇರಿ ಇತರೆ ಅಗತ್ಯ ಸೌಲಭ್ಯಗಳಿರಲಿಲ್ಲ. ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾದ ಶಿಕ್ಷಣ ದೊರೆತಿಲ್ಲ. ಇದೇ ಕಾರಣಕ್ಕೆ ಮೂರು ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರಿಕ್ಷೆ ನಡೆಸಲು ವಿವಿ ಹೊರಡಿಸಿದ್ದ ಅಧಿಸೂಚನೆಯನ್ನು ಧಾರವಾಡ ಹೈಕೋರ್ಟ್ ಪೀಠ ಡಿ.14ರಂದು ರದ್ದುಪಡಿಸಿದೆ.

ಇದೇ ರೀತಿ 5 ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆಯನ್ನು ಕೂಡ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು