6:28 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ಲೋಡ್ ಶೆಡ್ಡಿಂಗ್: ಚಿಕ್ಕಮಗಳೂರಿನಲ್ಲಿ ಇಂಧನ ಸಚಿವ ಜಾರ್ಜ್ ಏನು ಹೇಳಿದರು ಗೊತ್ತೇ?

15/08/2023, 21:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಆರಂಭದಲ್ಲಿ ಮಳೆ ಸ್ವಲ್ಪ ಕಡಿಮೆ ಆಯಿತು. ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಗಳ ಸರ್ವೀಸ್ ಮಾಡುವುದರಿಂದ ಥರ್ಮಲ್ ಪ್ಲಾಂಟ್ ಪವರ್ ಜನರೇಟ್ ಮಾಡೋದು ಕಡಿಮೆ ಆಯಿತು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಈಗ ಥರ್ಮಲ್ ಪ್ಲಾಂಟ್ ಜಾಸ್ತಿ ಮಾಡಲು ಆದೇಶ ಮಾಡಿದ್ದೇವೆ.
10 ದಿನದಲ್ಲಿ ಸರ್ವೀಸ್ ಮಾಡೋದನ್ನ ನಿಲ್ಲಿಸುತ್ತಾರೆ ಎಂದರು.
ನಮ್ಮ ಕಲ್ಲಿದ್ದಲು ಕ್ವಾಲಿಟಿ ಅಷ್ಟು ಸಾಕಾಗಲ್ಲ. ಆಮದು ಮಾಡಿಕೊಂಡ ಕಲ್ಲಿದ್ದಲು ಜೊತೆ ಮಿಕ್ಸ್ ಮಾಡಬೇಕು. ಮಹಾರಾಷ್ಟ್ರದ ಮಳೆಯಿಂದ ರೈಲಿನಲ್ಲಿ ಸಾಗಿಸುತ್ತಿದ್ದ ಕಲ್ಲಿದ್ದಲು ಒದ್ದೆಯಾಗಿದೆ. ವಿ ಆರ್ ಲಕ್ಕಿ, ಕರ್ನಾಟಕದಲ್ಲಿ ಸೋಲಾರ್ ಹೆಚ್ಚು ಬಳಸುತ್ತಾರೆ ಎಂದು ಸಚಿವರು ನುಡಿದರು.
4 ದಿನ ಸೌಥ್ ಇಂಡಿಯಾದಲ್ಲಿ ಗಾಳಿ ಬರಲಿಲ್ಲ. ಆಗಲೂ ಉತ್ಪಾದನೆ ಕಡಿಮೆ ಆಯಿತು. ನಿನ್ನೆ-ಮೊನ್ನೆಯಿಂದ ಪಿಕ್ ಅಪ್ ಆಗುತ್ತಿದೆ. ಸೋಲಾರ್ ಸಬ್ ಸ್ಟೇಷನ್ ನಲ್ಲಿ ಸೋಲಾರ್ ಉತ್ಪಾದನೆ ಮಾಡುತ್ತೇವೆ. 10-20-30 ಎಕರೆ ಮಾಡಿ ರಾಜ್ಯಾದ್ಯಂತ ಸೋಲಾರ್ ಉತ್ಪಾದನೆಯನ್ನ ಸಬ್ ಸ್ಟೇಷನ್‌ಗೆ ಕೊಡುತ್ತವೆ ಎಂದು ಇಂಧನ ಸಚಿವ ಜಾರ್ಜ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು