11:48 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಲೋಡ್ ಶೆಡ್ಡಿಂಗ್: ಚಿಕ್ಕಮಗಳೂರಿನಲ್ಲಿ ಇಂಧನ ಸಚಿವ ಜಾರ್ಜ್ ಏನು ಹೇಳಿದರು ಗೊತ್ತೇ?

15/08/2023, 21:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಆರಂಭದಲ್ಲಿ ಮಳೆ ಸ್ವಲ್ಪ ಕಡಿಮೆ ಆಯಿತು. ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಗಳ ಸರ್ವೀಸ್ ಮಾಡುವುದರಿಂದ ಥರ್ಮಲ್ ಪ್ಲಾಂಟ್ ಪವರ್ ಜನರೇಟ್ ಮಾಡೋದು ಕಡಿಮೆ ಆಯಿತು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಈಗ ಥರ್ಮಲ್ ಪ್ಲಾಂಟ್ ಜಾಸ್ತಿ ಮಾಡಲು ಆದೇಶ ಮಾಡಿದ್ದೇವೆ.
10 ದಿನದಲ್ಲಿ ಸರ್ವೀಸ್ ಮಾಡೋದನ್ನ ನಿಲ್ಲಿಸುತ್ತಾರೆ ಎಂದರು.
ನಮ್ಮ ಕಲ್ಲಿದ್ದಲು ಕ್ವಾಲಿಟಿ ಅಷ್ಟು ಸಾಕಾಗಲ್ಲ. ಆಮದು ಮಾಡಿಕೊಂಡ ಕಲ್ಲಿದ್ದಲು ಜೊತೆ ಮಿಕ್ಸ್ ಮಾಡಬೇಕು. ಮಹಾರಾಷ್ಟ್ರದ ಮಳೆಯಿಂದ ರೈಲಿನಲ್ಲಿ ಸಾಗಿಸುತ್ತಿದ್ದ ಕಲ್ಲಿದ್ದಲು ಒದ್ದೆಯಾಗಿದೆ. ವಿ ಆರ್ ಲಕ್ಕಿ, ಕರ್ನಾಟಕದಲ್ಲಿ ಸೋಲಾರ್ ಹೆಚ್ಚು ಬಳಸುತ್ತಾರೆ ಎಂದು ಸಚಿವರು ನುಡಿದರು.
4 ದಿನ ಸೌಥ್ ಇಂಡಿಯಾದಲ್ಲಿ ಗಾಳಿ ಬರಲಿಲ್ಲ. ಆಗಲೂ ಉತ್ಪಾದನೆ ಕಡಿಮೆ ಆಯಿತು. ನಿನ್ನೆ-ಮೊನ್ನೆಯಿಂದ ಪಿಕ್ ಅಪ್ ಆಗುತ್ತಿದೆ. ಸೋಲಾರ್ ಸಬ್ ಸ್ಟೇಷನ್ ನಲ್ಲಿ ಸೋಲಾರ್ ಉತ್ಪಾದನೆ ಮಾಡುತ್ತೇವೆ. 10-20-30 ಎಕರೆ ಮಾಡಿ ರಾಜ್ಯಾದ್ಯಂತ ಸೋಲಾರ್ ಉತ್ಪಾದನೆಯನ್ನ ಸಬ್ ಸ್ಟೇಷನ್‌ಗೆ ಕೊಡುತ್ತವೆ ಎಂದು ಇಂಧನ ಸಚಿವ ಜಾರ್ಜ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು