8:53 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಾಲ ಕಂತು ಬಾಕಿ: ಫ್ರೀಡಂ ಫೈಟರ್ ಪತ್ನಿಯ ಕಿವಿಯೊಲೆ, ಚೈನ್ ಎಗರಿಸಿದ ಬ್ಯಾಂಕ್ ಸಿಬ್ಬಂದಿ!

16/02/2025, 22:37

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ ಫೈಟರ್ ಪತ್ನಿಗೆ ಲೋನ್ ಕಟ್ಟಿಲ್ಲವೆಂದು ಕಿವಿಯಲ್ಲಿದ್ದ ಓಲೆಯನ್ನು ಬ್ಯಾಂಕ್ ನವರು ಮಂಗಮಾಯ ಮಾಡಿರುವ ಘಟನೆ ತಾಲ್ಲೂಕಿನ ಕೋಣಂದೂರಿನಲ್ಲಿ ನಡೆದಿದೆ.
ತಾಲೂಕಿನ ಬಿಲ್ಲೇಶ್ವರ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಎಸ್ ಚನ್ನವೀರಪ್ಪನವರ ಪತ್ನಿ ಹಾಲಮ್ಮನವರಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ಪಿಂಚಣಿ ಹಣ ಬರುತ್ತಿಲ್ಲ ಇದರ ನಡುವೆ ಈ ಹಿಂದೆ ಮನೆ ದುರಸ್ಥಿಗೆಂದು ಪಿಂಚಣಿ ಹಣದ ಆಧಾರದ ಮೇಲೆ ಮಾಡಿದ್ದ ಲೋನ್ ನ ಒಂದು ಕಂತು ಕಟ್ಟಿಲ್ಲವೆಂದು ಕಿವಿಯಲ್ಲಿದ್ದ ಓಲೆಯನ್ನು ಪಡೆದು 86 ರ ವಯೋವೃದ್ದೆಗೆ ನಿಂದಿಸಿ ಹೊರದಬ್ಬಿರುವ ಬಗ್ಗೆ ಕೋಣಂದೂರು ಉಪಠಾಣೆಯಲ್ಲಿ ದೂರು ದಾಖಲಾಗಿದೆ.
ಪಿಂಚಣಿ ಹಣದ ಆಧಾರದ ಮೇಲೆ ಮನೆ ದುರಸ್ಥಿಗೆ ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ ವೃದ್ದೆ ಕಳೆದ ನಾಲ್ಕು ತಿಂಗಳುಗಳಿಂದ ಪಿಂಚಣಿ ಹಣ ಬಂದಿಲ್ಲ ಈ ಹಿನ್ನಲೆಯಲ್ಲಿ ಲೋನ್ ತೀರುವಳಿ ಮಾಡಿರಲಿಲ್ಲ ಹಾಗೇಯೇ ಫೆಬ್ರವರಿ 10 ರಂದು ಮನೆಯಲ್ಲಿ ರೇಷನ್ ಕೊರತೆಯ ಕಾರಣ ಕಿವಿಯಲ್ಲಿದ್ದ ಓಲೆ ಚೈನ್ ನ್ನು ಅಡವಿಡಲು ಬ್ಯಾಂಕ್ ಗೆ ಬಂದರೇ ಕಲ್ಲು ಮನಸ್ಸಿನ ಬ್ಯಾಂಕ್ ಅಧಿಕಾರಿಗಳು ಚೈನ್ ನ್ನು ಪಡೆದು ಹಣ ನೀಡದೇ ಅವಾಚ್ಯವಾಗಿ ಏಕವಚನದಲ್ಲಿ ನಿಂದಿಸಿ ಹೊರದಬ್ಬಿದ್ದಾರೆ ಎಂದು ವೃದ್ದೆಯ ಮಗಳು ಶಕುಂತಳಾ ಆರೋಪಿಸಿದ್ದಾರೆ.
ಬಿಲ್ಲೇಶ್ವರ ಗ್ರಾಮದ ಎಸ್ ಚನ್ನವೀರಪ್ಪ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿ ದೇಶಸೇವೆ ಮಾಡುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅವರ ಬಗ್ಗೆ ನನಗೆ ಅತೀವ ಹೆಮ್ಮೆ ಇದೆ. ಆದರೆ ನಮ್ಮನ್ನು ಸರ್ಕಾರಗಳು ಹಾಗೂ ವ್ಯವಸ್ಥೆ ಇಷ್ಟು ನಿಕೃಷ್ಟವಾಗಿ ಕಾಣುತ್ತಿರುವುದು ಬೇಸರದ ಸಂಗತಿ ಎಂದು 87ರ ಹರೆಯದ ವೃದ್ದೆ ಹಾಲಮ್ಮ ತಮ್ಮ ನೋವನ್ನು ತೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು