3:43 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸಾಲ ಕಂತು ಬಾಕಿ: ಫ್ರೀಡಂ ಫೈಟರ್ ಪತ್ನಿಯ ಕಿವಿಯೊಲೆ, ಚೈನ್ ಎಗರಿಸಿದ ಬ್ಯಾಂಕ್ ಸಿಬ್ಬಂದಿ!

16/02/2025, 22:37

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ ಫೈಟರ್ ಪತ್ನಿಗೆ ಲೋನ್ ಕಟ್ಟಿಲ್ಲವೆಂದು ಕಿವಿಯಲ್ಲಿದ್ದ ಓಲೆಯನ್ನು ಬ್ಯಾಂಕ್ ನವರು ಮಂಗಮಾಯ ಮಾಡಿರುವ ಘಟನೆ ತಾಲ್ಲೂಕಿನ ಕೋಣಂದೂರಿನಲ್ಲಿ ನಡೆದಿದೆ.
ತಾಲೂಕಿನ ಬಿಲ್ಲೇಶ್ವರ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಎಸ್ ಚನ್ನವೀರಪ್ಪನವರ ಪತ್ನಿ ಹಾಲಮ್ಮನವರಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ಪಿಂಚಣಿ ಹಣ ಬರುತ್ತಿಲ್ಲ ಇದರ ನಡುವೆ ಈ ಹಿಂದೆ ಮನೆ ದುರಸ್ಥಿಗೆಂದು ಪಿಂಚಣಿ ಹಣದ ಆಧಾರದ ಮೇಲೆ ಮಾಡಿದ್ದ ಲೋನ್ ನ ಒಂದು ಕಂತು ಕಟ್ಟಿಲ್ಲವೆಂದು ಕಿವಿಯಲ್ಲಿದ್ದ ಓಲೆಯನ್ನು ಪಡೆದು 86 ರ ವಯೋವೃದ್ದೆಗೆ ನಿಂದಿಸಿ ಹೊರದಬ್ಬಿರುವ ಬಗ್ಗೆ ಕೋಣಂದೂರು ಉಪಠಾಣೆಯಲ್ಲಿ ದೂರು ದಾಖಲಾಗಿದೆ.
ಪಿಂಚಣಿ ಹಣದ ಆಧಾರದ ಮೇಲೆ ಮನೆ ದುರಸ್ಥಿಗೆ ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ ವೃದ್ದೆ ಕಳೆದ ನಾಲ್ಕು ತಿಂಗಳುಗಳಿಂದ ಪಿಂಚಣಿ ಹಣ ಬಂದಿಲ್ಲ ಈ ಹಿನ್ನಲೆಯಲ್ಲಿ ಲೋನ್ ತೀರುವಳಿ ಮಾಡಿರಲಿಲ್ಲ ಹಾಗೇಯೇ ಫೆಬ್ರವರಿ 10 ರಂದು ಮನೆಯಲ್ಲಿ ರೇಷನ್ ಕೊರತೆಯ ಕಾರಣ ಕಿವಿಯಲ್ಲಿದ್ದ ಓಲೆ ಚೈನ್ ನ್ನು ಅಡವಿಡಲು ಬ್ಯಾಂಕ್ ಗೆ ಬಂದರೇ ಕಲ್ಲು ಮನಸ್ಸಿನ ಬ್ಯಾಂಕ್ ಅಧಿಕಾರಿಗಳು ಚೈನ್ ನ್ನು ಪಡೆದು ಹಣ ನೀಡದೇ ಅವಾಚ್ಯವಾಗಿ ಏಕವಚನದಲ್ಲಿ ನಿಂದಿಸಿ ಹೊರದಬ್ಬಿದ್ದಾರೆ ಎಂದು ವೃದ್ದೆಯ ಮಗಳು ಶಕುಂತಳಾ ಆರೋಪಿಸಿದ್ದಾರೆ.
ಬಿಲ್ಲೇಶ್ವರ ಗ್ರಾಮದ ಎಸ್ ಚನ್ನವೀರಪ್ಪ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿ ದೇಶಸೇವೆ ಮಾಡುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅವರ ಬಗ್ಗೆ ನನಗೆ ಅತೀವ ಹೆಮ್ಮೆ ಇದೆ. ಆದರೆ ನಮ್ಮನ್ನು ಸರ್ಕಾರಗಳು ಹಾಗೂ ವ್ಯವಸ್ಥೆ ಇಷ್ಟು ನಿಕೃಷ್ಟವಾಗಿ ಕಾಣುತ್ತಿರುವುದು ಬೇಸರದ ಸಂಗತಿ ಎಂದು 87ರ ಹರೆಯದ ವೃದ್ದೆ ಹಾಲಮ್ಮ ತಮ್ಮ ನೋವನ್ನು ತೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು