6:19 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಾಲ ಕಂತು ಬಾಕಿ: ಫ್ರೀಡಂ ಫೈಟರ್ ಪತ್ನಿಯ ಕಿವಿಯೊಲೆ, ಚೈನ್ ಎಗರಿಸಿದ ಬ್ಯಾಂಕ್ ಸಿಬ್ಬಂದಿ!

16/02/2025, 22:37

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ ಫೈಟರ್ ಪತ್ನಿಗೆ ಲೋನ್ ಕಟ್ಟಿಲ್ಲವೆಂದು ಕಿವಿಯಲ್ಲಿದ್ದ ಓಲೆಯನ್ನು ಬ್ಯಾಂಕ್ ನವರು ಮಂಗಮಾಯ ಮಾಡಿರುವ ಘಟನೆ ತಾಲ್ಲೂಕಿನ ಕೋಣಂದೂರಿನಲ್ಲಿ ನಡೆದಿದೆ.
ತಾಲೂಕಿನ ಬಿಲ್ಲೇಶ್ವರ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಎಸ್ ಚನ್ನವೀರಪ್ಪನವರ ಪತ್ನಿ ಹಾಲಮ್ಮನವರಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ಪಿಂಚಣಿ ಹಣ ಬರುತ್ತಿಲ್ಲ ಇದರ ನಡುವೆ ಈ ಹಿಂದೆ ಮನೆ ದುರಸ್ಥಿಗೆಂದು ಪಿಂಚಣಿ ಹಣದ ಆಧಾರದ ಮೇಲೆ ಮಾಡಿದ್ದ ಲೋನ್ ನ ಒಂದು ಕಂತು ಕಟ್ಟಿಲ್ಲವೆಂದು ಕಿವಿಯಲ್ಲಿದ್ದ ಓಲೆಯನ್ನು ಪಡೆದು 86 ರ ವಯೋವೃದ್ದೆಗೆ ನಿಂದಿಸಿ ಹೊರದಬ್ಬಿರುವ ಬಗ್ಗೆ ಕೋಣಂದೂರು ಉಪಠಾಣೆಯಲ್ಲಿ ದೂರು ದಾಖಲಾಗಿದೆ.
ಪಿಂಚಣಿ ಹಣದ ಆಧಾರದ ಮೇಲೆ ಮನೆ ದುರಸ್ಥಿಗೆ ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ ವೃದ್ದೆ ಕಳೆದ ನಾಲ್ಕು ತಿಂಗಳುಗಳಿಂದ ಪಿಂಚಣಿ ಹಣ ಬಂದಿಲ್ಲ ಈ ಹಿನ್ನಲೆಯಲ್ಲಿ ಲೋನ್ ತೀರುವಳಿ ಮಾಡಿರಲಿಲ್ಲ ಹಾಗೇಯೇ ಫೆಬ್ರವರಿ 10 ರಂದು ಮನೆಯಲ್ಲಿ ರೇಷನ್ ಕೊರತೆಯ ಕಾರಣ ಕಿವಿಯಲ್ಲಿದ್ದ ಓಲೆ ಚೈನ್ ನ್ನು ಅಡವಿಡಲು ಬ್ಯಾಂಕ್ ಗೆ ಬಂದರೇ ಕಲ್ಲು ಮನಸ್ಸಿನ ಬ್ಯಾಂಕ್ ಅಧಿಕಾರಿಗಳು ಚೈನ್ ನ್ನು ಪಡೆದು ಹಣ ನೀಡದೇ ಅವಾಚ್ಯವಾಗಿ ಏಕವಚನದಲ್ಲಿ ನಿಂದಿಸಿ ಹೊರದಬ್ಬಿದ್ದಾರೆ ಎಂದು ವೃದ್ದೆಯ ಮಗಳು ಶಕುಂತಳಾ ಆರೋಪಿಸಿದ್ದಾರೆ.
ಬಿಲ್ಲೇಶ್ವರ ಗ್ರಾಮದ ಎಸ್ ಚನ್ನವೀರಪ್ಪ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿ ದೇಶಸೇವೆ ಮಾಡುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅವರ ಬಗ್ಗೆ ನನಗೆ ಅತೀವ ಹೆಮ್ಮೆ ಇದೆ. ಆದರೆ ನಮ್ಮನ್ನು ಸರ್ಕಾರಗಳು ಹಾಗೂ ವ್ಯವಸ್ಥೆ ಇಷ್ಟು ನಿಕೃಷ್ಟವಾಗಿ ಕಾಣುತ್ತಿರುವುದು ಬೇಸರದ ಸಂಗತಿ ಎಂದು 87ರ ಹರೆಯದ ವೃದ್ದೆ ಹಾಲಮ್ಮ ತಮ್ಮ ನೋವನ್ನು ತೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು