6:01 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಜೀವನಹಳ್ಳಿಯಲ್ಲಿ ಫುಟ್ಬಾಲ್ ಟರ್ಫ್‌ ನಿರ್ಮಾಣಕ್ಕೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ

29/11/2025, 22:01

ಬೆಂಗಳೂರು(reporterkarnataka.com): ಸರ್ವಜ್ಞ ನಗರದ ಜೀವನಹಳ್ಳಿಯಲ್ಲಿ ಫುಟ್ಬಾಲ್ ಟರ್ಫ್‌ ನಿರ್ಮಾಣಕ್ಕೆ ಕೇಳಿ ಬಂದಿರುವ ವಿರೋಧಕ್ಕೆ ಬಗ್ಗದೇ, ಕ್ರೀಡಾಂಗಣ ನಿರ್ಮಾಣ ಆಗಬೇಕೆಂದು ಆಗ್ರಹಿಸಿ ಸ್ಥಳೀಯರು ಕ್ರೀಡಾಂಗಣದ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.


ಇಂಧನ ಸಚಿವರು ಹಾಗೂ ಸರ್ವಜ್ಞ ನಗರದ ಶಾಸಕರಾದ ಕೆ.ಜೆ.ಜಾರ್ಜ್ ಅವರ ದೂರದೃಷ್ಟಿಯ ಫಲವಾಗಿ ಜೀವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ಮಾನದಂಡದಲ್ಲಿ ಫುಟ್ಬಾಲ್ ಟರ್ಫ್ ನಿರ್ಮಾಣವಾಗುತ್ತಿದೆ. ಆದರೆ, ಈ ಟರ್ಫ್ ಅನುಕೂಲಸ್ಥರಿಗೆ ಮಾತ್ರವೇ ಹೊರತು ಸಾಮಾನ್ಯರಿಗೆ ಈ ಕ್ರೀಡೆಯ ಸೌಲಭ್ಯವಿರುವುದಿಲ್ಲ. ಕ್ರೀಡಾಂಗಣ ಬಳಕೆಗೆ ಹಣ ಪೀಕಿಸುತ್ತಾರೆ ಎಂದು ಸ್ಥಳೀಯರೆಂದು ಬಿಂಬಿಸಿಕೊಂಡಿದ್ದವರು ಕೆಲ ದಿನಗಳ ಹಿಂದೆ ಅಪಪ್ರಚಾರ ಮಾಡಿದ್ದರು. ಇದನ್ನು ವಿರೋಧಿಸಿ, ಸರ್ವಜ್ಞನ ನಗರದ ಶಾಲಾ ಮಕ್ಕಳು ಸೇರಿದಂತೆ ಸ್ಥಳೀಯರು ಕ್ರೀಡಾಂಗಣದ ಬಳಿ ಪ್ರತಿಭಟನೆ ನಡೆಸಿದರು.
ಸಚಿವ ಕೆ.ಜೆ.ಜಾರ್ಜ್ ಅವರನ್ನು ಆದಷ್ಟು ಬೇಗ ಕ್ರೀಡಾಂಗಣವನ್ನು ಕಟ್ಟಿಕೊಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ‘ಜೀವನಹಳ್ಳಿಯಲ್ಲಿ ಇಂಥ ಗುಣಮಟ್ಟದ ಕ್ರೀಡಾಂಗಣ ಬರುತ್ತಿರುವುದನ್ನು ಸಹಿಸದ ವಿರೋಧಿಗಳು ಇಂಥ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇಂಥ ಟೊಳ್ಳು ಬೆದರಿಕೆಗೆ ಬಗ್ಗದೇ ನಮ್ಮ ಶಾಸಕರು ಕ್ರೀಡಾ ಸೌಕರ್ಯವನ್ನು ಒದಗಿಸಬೇಕು,’ ಎಂದು ಆಗ್ರಹಿಸಿದ್ದಾರೆ.
ಸರ್ವಜ್ಞ ನಗರ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ವೆಲ್ಫೇರ್ ಅಸೋಸಿಯೇಷನ್ ಹಾಗೂ ಸಚಿವ ಕೆ.ಜೆ.ಜಾರ್ಜ್ ಅವರ ವಿಶೇಷ ಮುತುವರ್ಜಿಯಿಂದ, ಸಿಎಸ್‌ಆರ್ ಅನುದಾನದಲ್ಲಿ ಜೀವನಹಳ್ಳಿಯಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಹಾಗೂ ಫುಟ್ಬಾಲ್ ಟರ್ಫ್ ನಿರ್ಮಿಸಲಾಗುತ್ತಿದೆ. ಕಾಂಪ್ಲೆಕ್ಸ್ ನೆಲ ಅಂತಸ್ಥಿನಲ್ಲಿ ಯೋಗ, ಜಿಮ್ನಾಷಿಯಮ್ ಹಾಗೂ ಮೊದಲ ಅಂತಸ್ಥಿನಲ್ಲಿ ಎರಡು ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ಫುಟ್ಬಾಲ್ ಟರ್ಫ್ ಸುತ್ತಲೂ ವೀಕ್ಷಕರ ಗ್ಯಾಲರಿ ಸಿದ್ದವಾಗುತ್ತಿದೆ. ಆಧುನಿಕ ಶೈಲಿಯಲ್ಲಿ ಎದ್ದುನಿಂತಿರುವ ಕ್ರೀಡಾ ಸಂಕೀರ್ಣ ಮಕ್ಕಳಿಗೆ ಕ್ರೀಡಾ ಸ್ಪೂರ್ತಿಯ ತಾಣವಾಗಲಿದೆ ಎಂದು ಸ್ಥಳೀಯರು ಹೇಳಿದರು.

*ಅಮಲಿನ ಅಡ್ಡವಾಗಿದ್ದ ಸ್ಥಳ:* ಕ್ರೀಡಾಂಗಣ ತಲೆ ಎತ್ತುವ ಮೊದಲು ಸಂಜೆ ನಂತರ ಸ್ಥಳೀಯರು ವಿಶೇಷವಾಗಿ ಮಹಿಳೆಯರು, ಮಕ್ಕಳು ಈ ಕಡೆ ಬರಲು ಭಯ ಪಡುತ್ತಿದ್ದರು. ಕುಡುಕರು, ಪುಂಡರ ಹಾವಳಿಗೆ ಹೆಣ್ಣು ಮಕ್ಕಳು, ಸಣ್ಣ ಮಕ್ಕಳು ತತ್ತರಿಸಿದ್ದರು. ಈ ಸಮಸ್ಯೆಗೆ ಸಚಿವ ಕೆ.ಜೆ.ಜಾರ್ಜ್ ನೀಡಿದ ಪರಿಹಾರವೇ ‘ಕ್ರೀಡಾ ಹಬ್’ ನಿರ್ಮಾಣ. ಸಚಿವರ ನಿರ್ಧಾರದಿಂದ ನಿಟ್ಟುಸಿರು ಬಿಟ್ಟಿದ್ದ ಸ್ಥಳೀಯರಿಗೆ ಕೆಲವರ ಅಪಪ್ರಚಾರ ಆತಂಕ ಸೃಷ್ಟಿಸಿದೆ. ಕನಸಿನ ಕ್ರೀಡಾಂಗಣದ ಯೋಜನೆ ಕೈಬಿಡಬಾರದು ಎಂದು ಆಗ್ರಹಿಸಿ ಜೀವನಹಳ್ಳಿ ಜನ ಇಂದು ಪ್ರತಿಭಟನೆ ನಡೆಸುವಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು