12:50 AM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಲಾಕ್ ಡೌನ್ ನಿಯಮ ಪಾಲಿಸಿ ಊರಿನವರಿಂದಲೇ ಶಾಲೆ ಕಟ್ಟಡ ದುರಸ್ತಿ; ದ.ಕ. ಜಿಲ್ಲೆಯಲ್ಲೇ ಅಪರೂಪದ ಘಟನೆ !!

23/05/2021, 11:52

ಅನುಷ್ ಪಂಡಿತ್ ಮಂಗಳೂರು

Info.reporterkarnataka@gmail.com

ದೇಶದಾದ್ಯಂತ ಕೊರೊನಾ ತಂದ ಸಂಕಷ್ಟ ಅಷ್ಟಿಷ್ಟಲ್ಲ… ಜನರು  ಕೊರೊನಾ ಅಲೆಗೆ ತತ್ತರಿಸಿ ಹೋಗಿದ್ದಾರೆ. ಉದ್ಯೋಗಸ್ಥ ಲಾಕ್ ಡೌನ್ ನಿಂದ ಮನೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಶಾಲಾ ಕಾಲೇಜು ಮಕ್ಕಳು ಆನ್ಲೈನ್ ಶಿಕ್ಷಣದ ಮೊರೆ ಹೋಗಿರುವುದು ಅನಿವಾರ್ಯ. ಅದರಂತೆ ಎಲ್ಲವೂ ಯಥಾಸ್ಥಿತಿ ತಲುಪಿದ ಮೇಲೆ ಶಾಲೆ ತೆರೆಯಬೇಕು. ಮಕ್ಕಳು ಕಲಿತು ದೇಶದ ಉಜ್ವಲ ಭವಿಷ್ಯ ರೂಪಿಸಬೇಕು. 


ಇದಕ್ಕೆ ಪುಷ್ಟಿ ಕೊಡುವಂತೆ ದ. ಕ ಜಿಲ್ಲೆ ಯ ಪುತ್ತೂರು ತಾಲೂಕಿನ ಕುಂಜೂರು ಪಂಜ ಶಾಲೆ ಮಾದರಿಯಾಗಿದೆ.


ಊರಿನ ಕೆಲ ನಾಗರಿಕರು ಹಾಗೂ ಶಾಲೆಯ ಹಳೆಯ ವಿದ್ಯಾಥಿಗಳು ಇಂತಹದೊಂದು ಕಾರ್ಯಕ್ಕೆ ಮುಂದಾಗಿದ್ದಾರೆ ಎಂದರೆ ತಪ್ಪಾಗಲಾರದು. ಅದೇನೆಂದರೆ ಲಾಕ್ಡೌನ್ ನಲ್ಲಿ ಮನೆಯಲ್ಲಿ ಕುಳಿತು ಕಾಲ ಹರಣ ಮಾಡುವ ಬದಲು ಕೋವಿಡ್ ನಿಯಮ ಪಾಲಿಸಿ ಮಾಸ್ಕ್ ಧರಿಸಿ ಫೀಲ್ಡಿಗಿಳಿದಿದ್ದಾರೆ.


ಇಲ್ಲಿನ 70 ವರ್ಷ ಹಳೆಯದಾದ ಸರಕಾರಿ ಶಾಲೆಯು  ಗಾಳಿ ಮಳೆಗೆ ಸೋರುತ್ತದೆ. ಶಾಲಾ ಕೊಠಡಿಯಲೊಳಗೆ ನೀರು ಸೋರುತ್ತದೆ. ಇದನ್ನು ಮನಗಂಡ ಶಿಕ್ಷಣ ಪ್ರೇಮಿಗಳು ಮಕ್ಕಳ ಮುಂದಿನ ಕಲಿಕೆ ಅವಧಿಗೆ ಯಥಾಸ್ಥಿತಿಗೆ ತರಲು ಆಡಳಿತ ಮಂಡಳಿ ಹಾಗೂ ಹಳೆಯ ವಿದ್ಯಾಥಿಗಳು, ಊರಿನ ನಾಗರಿಕರೊಂದಿಗೆ ಸೇರಿಕೊಂಡು, ಊರ ನಾಗರೀಕರ, ಹಳೆ ವಿದ್ಯಾರ್ಥಿಗಳ ದೇಣಿಗೆ ಹಣದಲ್ಲಿ ದುರಸ್ತಿ ಕಾರ್ಯಾದಲ್ಲಿ ತೊಡಗಿದ್ದಾರೆ. ನಾವು ಕಲಿತ ಶಾಲೆ ಅಭಿಮಾನ ಮರೆಯದೆ ಮುಂದಿನ ಪೀಳಿಗೆ ಒಳ್ಳೆಯ ಶಿಕ್ಷಣ ಪಡೆಯಬೇಕೆಂಬ ದೃಷ್ಟಿಯಿಂದ ಇಂತಹ ಮಹತ್ವದ ಕಾರ್ಯದಲ್ಲಿ ತೊಡಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯಾಗಿದೆ.
ಇಂತಹ ಕಾರ್ಯಕ್ಕೆ ಜನಪ್ರತಿನಿಧಿಗಳು, ಸಹಾಯ ಹಸ್ತ ನೀಡಲಿ ಎನ್ನುವುದು ಆಶಯ.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಅನುದಾನ ನೀಡುವ ಭರವಸೆ ನೀಡಿದೆ. ಹಾಗೂ ಕರ್ನಾಟಕ ಬ್ಯಾಂಕ್ ತನ್ನ ಸಿ ಎಸ್ ಆರ್ ಯೋಜನೆಯಡಿ ಅನುದಾನ ಕೊಡುತ್ತೇವೆ ಎಂದು ಹೇಳಿದ್ದಾರೆ. ಶಾಸಕರು ಕೂಡ ಭರವಸೆ ನೀಡಿದ್ದಾರೆ ಆದರೆ ಯಾವುದೇ ಅನುದಾನ ಸರಕಾರ ದಿಂದ ಈವರೆಗೆ ಬಂದಿಲ್ಲ.

ಲೋಕೇಶ್ ಬಲ್ಯಾಯ,ಹಳೆ ವಿದ್ಯಾರ್ಥಿ ದೊಡ್ಡಡ್ಕ

ಇತ್ತೀಚಿನ ಸುದ್ದಿ

ಜಾಹೀರಾತು