7:38 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿ 4 ಮದುವೆ: ಸುತ್ತಲಿದೆಯೇ ಪಾಲಿಕೆ ಆರೋಗ್ಯಾಧಿಕಾರಿ ಕೊರಳು ?

21/06/2021, 20:30

ಮಂಗಳೂರು(reporterkarnataka news): ಲಾಕ್ ಡೌನ್ ಗೈಡ್ ಲೈನ್ಸ್ ಗಾಳಿಗೆ ತೂರಿ ನಗರದ ಮಂಗಳಾದೇವಿಯಲ್ಲಿ ಭಾನುವಾರ ನಡೆದ ಅದ್ದೂರಿ ಮದುವೆ ಸಮಾರಂಭ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ

ಅವರ ಕೊರಳಿಗೆ ಸುತ್ತುವ ಎಲ್ಲ ಲಕ್ಷಣಗಳಿವೆ.

ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಮನೆ ಬಿಟ್ಟು ಹೊರಗಡೆ ದೇವಸ್ಥಾನ, ಹಾಲ್ , ಛತ್ರಗಳಲ್ಲಿ ವಿವಾಹ ನಡೆಸಲು ಅವಕಾಶವಿಲ್ಲ. ಮನೆಯಲ್ಲಿ ಕೂಡ 25 ಮಂದಿ ಭಾಗವಹಿಸಲು ಮಾತ್ರ ಅವಕಾಶವಿದೆ. ವಾಸ್ತವಾಂಶ ಹೀಗಿರುವಾಗ ಮಂಗಳೂರು ಮಹಾನಗರಪಾಲಿಕೆ ಯಾವ ನೆಲೆಯಲ್ಲಿ ಮಂಗಳಾದೇವಿ ದೇಗುಲದ ಸಭಾಂಗಣದಲ್ಲಿ ಮದುವೆ ನಡೆಸಲು ಅವಕಾಶ ನೀಡಿತು ಎಂಬ ಪ್ರಶ್ನೆ ಉದ್ಬವಿಸಿದೆ. ಅದಲ್ಲದೆ 4 ಮದುವೆಯಲ್ಲಿ 200ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಪಾಲಿಕೆಯ ಆರೋಗ್ಯ ನಿರೀಕ್ಷಕರು ಹೇಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದರು. ಯಾರು ಪ್ರಭಾವ ಬೀರಿ ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದರು ಎನ್ನುವ ಕುರಿತು ತನಿಖೆ ನಡೆಯಲಿದೆ.

ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶನ ಸದಸ್ಯ ಬಿಜೆಪಿಯ ಭಾಸ್ಕರಚಂದ್ರ ಶೆಟ್ಟಿ ಅವರ ಪುತ್ರಿಯ ಮದುವೆ ಸೇರಿದಂತೆ ಒಟ್ಟು ನಾಲ್ಕು ಜೋಡಿ ವಿವಾಹ

ನಡೆದಿತ್ತು. ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಸಭಾಂಗಣದಲ್ಲಿ ವಿವಾಹ ಸಮಾರಂಭ ಏರ್ಪಟ್ಟಿತ್ತು. ಬೆಳಗ್ಗೆ 10 ಗಂಟೆಯಿಂದ 200ಕ್ಕೂ ಹೆಚ್ಚು ಮಂದಿ ವಿವಿಧ ವಾಹನಗಳಲ್ಲಿ ಆಗಮಿಸಿದ್ದರು. ಒಂದು ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಕೂಡ ಅಲ್ಲಿ ಉಂಟಾಗಿತ್ತು. ಕೊಂಬು ಕಹಳೆ ಮಂಗಳವಾದ್ಯ ಮೊಳಗಿತ್ತು. ಈ ಕುರಿತು ಸ್ಥಳೀಯ ನಿವಾಸಿಗಳೇ ದೂರು ನೀಡಿದ್ದರು. ಮಂಗಳೂರು ಅಸಿಸ್ಟೆಂಟ್ ಕಮಿಷನರ್ ಮದನ್ ಮೋಹನ್, ಪಾಲಿಕೆ ಉಪ ಆಯುಕ್ತ ಬಿನಾಯ್ ನಂಬಿಯಾರ್ ನೇತೃತ್ವದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು