11:36 PM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿ 4 ಮದುವೆ: ಸುತ್ತಲಿದೆಯೇ ಪಾಲಿಕೆ ಆರೋಗ್ಯಾಧಿಕಾರಿ ಕೊರಳು ?

21/06/2021, 20:30

ಮಂಗಳೂರು(reporterkarnataka news): ಲಾಕ್ ಡೌನ್ ಗೈಡ್ ಲೈನ್ಸ್ ಗಾಳಿಗೆ ತೂರಿ ನಗರದ ಮಂಗಳಾದೇವಿಯಲ್ಲಿ ಭಾನುವಾರ ನಡೆದ ಅದ್ದೂರಿ ಮದುವೆ ಸಮಾರಂಭ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ

ಅವರ ಕೊರಳಿಗೆ ಸುತ್ತುವ ಎಲ್ಲ ಲಕ್ಷಣಗಳಿವೆ.

ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಮನೆ ಬಿಟ್ಟು ಹೊರಗಡೆ ದೇವಸ್ಥಾನ, ಹಾಲ್ , ಛತ್ರಗಳಲ್ಲಿ ವಿವಾಹ ನಡೆಸಲು ಅವಕಾಶವಿಲ್ಲ. ಮನೆಯಲ್ಲಿ ಕೂಡ 25 ಮಂದಿ ಭಾಗವಹಿಸಲು ಮಾತ್ರ ಅವಕಾಶವಿದೆ. ವಾಸ್ತವಾಂಶ ಹೀಗಿರುವಾಗ ಮಂಗಳೂರು ಮಹಾನಗರಪಾಲಿಕೆ ಯಾವ ನೆಲೆಯಲ್ಲಿ ಮಂಗಳಾದೇವಿ ದೇಗುಲದ ಸಭಾಂಗಣದಲ್ಲಿ ಮದುವೆ ನಡೆಸಲು ಅವಕಾಶ ನೀಡಿತು ಎಂಬ ಪ್ರಶ್ನೆ ಉದ್ಬವಿಸಿದೆ. ಅದಲ್ಲದೆ 4 ಮದುವೆಯಲ್ಲಿ 200ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಪಾಲಿಕೆಯ ಆರೋಗ್ಯ ನಿರೀಕ್ಷಕರು ಹೇಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದರು. ಯಾರು ಪ್ರಭಾವ ಬೀರಿ ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದರು ಎನ್ನುವ ಕುರಿತು ತನಿಖೆ ನಡೆಯಲಿದೆ.

ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶನ ಸದಸ್ಯ ಬಿಜೆಪಿಯ ಭಾಸ್ಕರಚಂದ್ರ ಶೆಟ್ಟಿ ಅವರ ಪುತ್ರಿಯ ಮದುವೆ ಸೇರಿದಂತೆ ಒಟ್ಟು ನಾಲ್ಕು ಜೋಡಿ ವಿವಾಹ

ನಡೆದಿತ್ತು. ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಸಭಾಂಗಣದಲ್ಲಿ ವಿವಾಹ ಸಮಾರಂಭ ಏರ್ಪಟ್ಟಿತ್ತು. ಬೆಳಗ್ಗೆ 10 ಗಂಟೆಯಿಂದ 200ಕ್ಕೂ ಹೆಚ್ಚು ಮಂದಿ ವಿವಿಧ ವಾಹನಗಳಲ್ಲಿ ಆಗಮಿಸಿದ್ದರು. ಒಂದು ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಕೂಡ ಅಲ್ಲಿ ಉಂಟಾಗಿತ್ತು. ಕೊಂಬು ಕಹಳೆ ಮಂಗಳವಾದ್ಯ ಮೊಳಗಿತ್ತು. ಈ ಕುರಿತು ಸ್ಥಳೀಯ ನಿವಾಸಿಗಳೇ ದೂರು ನೀಡಿದ್ದರು. ಮಂಗಳೂರು ಅಸಿಸ್ಟೆಂಟ್ ಕಮಿಷನರ್ ಮದನ್ ಮೋಹನ್, ಪಾಲಿಕೆ ಉಪ ಆಯುಕ್ತ ಬಿನಾಯ್ ನಂಬಿಯಾರ್ ನೇತೃತ್ವದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು