8:53 PM Tuesday11 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು