9:47 AM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು