10:43 PM Thursday19 - September 2024
ಬ್ರೇಕಿಂಗ್ ನ್ಯೂಸ್
ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು