6:05 AM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ

14/05/2024, 21:34

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್(ಟ್ವಿಟರ್)ನಲ್ಲಿ ಹೇಳಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿಎಸ್ ವೈ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದು ಮುಖ್ಯಮಂತ್ರಿ ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು