11:24 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ

14/05/2024, 21:34

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್(ಟ್ವಿಟರ್)ನಲ್ಲಿ ಹೇಳಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿಎಸ್ ವೈ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದು ಮುಖ್ಯಮಂತ್ರಿ ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು