3:14 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಗೇಮ್ ಪ್ಲಾನ್ ಸಿದ್ದವಾಗುತ್ತಿದೆಯೇ?: ಜೆಡಿಎಸ್ – ಬಿಜೆಪಿಯ ರಣತಂತ್ರ ಏನು?

07/06/2023, 10:25

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯ ವಿಧಾನಸಭೆ ಚುನಾವಣೆಯ ಬಳಿಕ ಮತ್ತೊಂದು ರಾಜಕೀಯ ಧ್ರುವೀಕರಣಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ ಹಾಗೂ ಪಾತಾಳಕ್ಕೆ ಕುಸಿದ ಜೆಡಿಎಸ್ ಹೊಸ ಗೇಮ್ ಪ್ಲಾನ್ ಸಿದ್ದಪಡಿಸುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಗಾಗಿ ಈ ಮೆಗಾ ಡೀಲ್ ತಯಾರಿಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳನ್ನು ಬಾಚಿಕೊಂಡಿದ್ದ ಬಿಜೆಪಿ ಈ ಬಾರಿ ಕನಿಷ್ಠ 20 ಸೀಟುಗಳನ್ನಾದರೂ ಉಳಿಸಿಕೊಳ್ಳುವ ಟಾರ್ಗೆಟ್ ಹಾಕಿಕೊಂಡಿದೆ. ಅದೇ ರೀತಿ ವಿಧಾನಸಭೆ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲೇ ಕುಸಿತ ಕಂಡ ಜೆಡಿಎಸ್ ಗೆ
ತನ್ನ ಅಸ್ತಿತ್ವ ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ. ಜೆಡಿಎಸ್ ತನ್ನ ಮಾನ ಉಳಿಸಿಕೊಳ್ಳಬೇಕಾದರೆ ಕನಿಷ್ಠ 5 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕಾಗಿದೆ. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಜೋಡೆತ್ತಿನ ರಾಜ್ಯ ಸರಕಾರದ ಮುಂದೆ ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ತನ್ನ ಟಾರ್ಗೆಟ್ ಮುಟ್ಟುವುದು ಅಷ್ಟು ಸುಲಭದ ಮಾತಲ್ಲ. ಪ್ರಧಾನಿ ಮೋದಿ ವರ್ಚಸ್ಸು, ಹಿಂದುತ್ವ ವರ್ಕ್ ಔಟ್ ಆಗೊಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಹೊಸ ಪ್ಲಾನ್ ಸಿದ್ಧವಾಗಿದೆ.
ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ಗೆಲುವು ಸಾಧಿಸಲು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೊಸ ಪ್ಲಾನ್ ಸಿದ್ದಪಡಿಸಿದ್ದಾರೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ವಿಶ್ವಸನೀಯ ಮೂಲಗಳಿಂದ ಗೊತ್ತಾಗಿದೆ. ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಜತೆ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ ಎನ್ನಲಾಗಿದೆ. ಇದರ ಪ್ರಕಾರ ರಾಜ್ಯದ ಓಟ್ಟು 28 ಕ್ಷೇತ್ರಗಳ ಪೈಕಿ ಕನಿಷ್ಠ 5 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕು. ಉಳಿದ ಕಡೆ ಜೆಡಿಎಸ್ , ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲಿಸುವುದು ಆಗಿದೆ. ಈ ವಿಷಯದಲ್ಲಿ ಕುಮಾರಸ್ವಾಮಿ ಮತ್ತು ಬಿ.ಎಲ್. ಸಂತೋಷ್ ಸಹಮತಕ್ಕೆ ಬಂದಿದ್ದಾರೆ. ಹಾಗೆ ಚೆಂಡನ್ನು ಬಿಜೆಪಿ ಹೈಕಮಾಂಡ್ ಅಂಗಳಕ್ಕೆ ತಳ್ಳಿದೆ. ಇನ್ನು ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಜತೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜಕೀಯದಲ್ಲಿ ಏನು ಬೇಕಾದರೂ ನಡೆಯಬಹುದು ಎನ್ನುವುದು ಬರೇ ಮಾತಲ್ಲ, ವಾಸ್ತವ ಕೂಡ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು