10:04 AM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಲೋಕಸಭೆಯಲ್ಲಿ ಸಿಗದ ಮ್ಯಾಜಿಕ್ ನಂಬರ್: ಸರಕಾರ ರಚನೆಗೆ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡುಗೆ ಬಿಜೆಪಿ, ಕಾಂಗ್ರೆಸ್ ಗಾಳ

04/06/2024, 18:22

ಹೊಸದಿಲ್ಲಿ(reporterkarnataka.com): ಲೋಕಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಹಾಗೂ ಕಾಂಗ್ರೆಸ್ ಪಕ್ಷ ಕಿಂಗ್ ಮೇಕರ್ ಆಗಿ ಹೊರ ಹೊಮ್ಕಿದ ಜೆಡಿಯು ಹಾಗೂ ಟಿಡಿಪಿಯ ಮೊರೆ ಹೋಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ರಾಜ್ಯದಲ್ಲಿ ಅದ್ಬುತ ಗೆಲುವು ಸಾಧಿಸಿದಕ್ಕಾಗಿ ಅಭಿನಂದನೆ ಕೋರಿದ್ದಾರೆ. ಹಾಗೆ ಎನ್ ಡಿಎ ಮೈತ್ರಿಕೂಟದ ಭಾಗವಾದ ಟಿಡಿಪಿಯು ಹೊಸತಾಗಿ ಸರಕಾರ ರಚಿಸಲು ಎನ್ ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡುವಂತೆ ಕೋರಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ಇಬ್ಬರು ನಾಯಕರು ಈ ಹಿಂದೆ ಮೋದಿ ವಿರೋಧಿಗಳಾಗಿದ್ದರು. ಇಂಡಿಯಾ ಮೈತ್ರಿಕೂಟದಲ್ಲಿ ಸರಿಯಾದ ಗೌರವ ಸಿಕ್ಕಿಲ್ಲ ಎಂಬ ಕಾರಣಕ್ಕೆ ನಿತೀಶ್ ಕುಮಾರ್ ಅವರು ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಮೈತ್ರಿಕೂಟ ತೊರೆದು ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ್ದರು. ಈ ಹಿನ್ನೆಲೆಯಲ್ಲಿ ಅತಂತ್ರ ಸ್ಥಿತಿ ಎದುರಾಗುತ್ತಿದ್ದಂತೆ ಬಿಜೆಪಿ ನಾಯಕರು ಈ ಇಬ್ಬರು ನಾಯಕರ ಮನವೊಲಿಸುವ ಪ್ರಯತ್ನ ಆರಂಭಿಸಿದ್ದಾರೆ.
ಈ ನಡುವೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಕೂಡ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರಿಗೆ ಗಾಳ ಹಾಕಲಾರಂಭಿಸಿದೆ. ಆಗಾಗ ಮನಸ್ಸು ಬದಲಾಯಿಸುವುದರಲ್ಲಿ ನಿಸ್ಸೀಮನಾಗಿರುವ ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟಕ್ಕೆ ಮರಳಿದರೂ ಆಶ್ಚರ್ಯಪಡುವಂತದ್ದೇನೂ ಇಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ. ಚಂದ್ರಬಾಬು ನಾಯ್ಡು ಅವರು ಆರಂಭದಿಂದಲೂ ಕಾಂಗ್ರೆಸ್ ಪಕ್ಷವನ್ನು ವಿರೋಧಿಸುತ್ತಲೇ ರಾಜಕೀಯ ಮಾಡಿಕೊಂಡು ಬಂದವರು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ನಾಯ್ಡು ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು