2:10 AM Friday1 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಲೋಕಸಭೆಯ ಸಂದೇಶದ ಚುನಾವಣೆ, ಗ್ಯಾರಂಟಿಗೆ ಒಪ್ಪದ ಮತದಾರ: ವಿಜಯೋತ್ಸವದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಅಭಿಮತ

03/12/2023, 22:41

ಸುರತ್ಕಲ್(reporterkarnataka.com):ದೇಶದ ಪ್ರಮುಖ ರಾಜ್ಯಗಳ ಚುನಾವಣೆಯ ಫಲಿತಾಂಶ ಲೋಕಸಭೆಯ ಸಂದೇಶದ ಚುನಾವಣೆಯಾಗಿದೆ. ಗ್ಯಾರಂಟಿಗಿಂತ ನಮಗೆ ದೇಶ, ರಾಷ್ಟ್ರೀಯತೆ ಮುಖ್ಯ ಎಂದು ಮತದಾರ ಬಿಜೆಪಿ ಬೆಂಬಲಿಸಿ ಮತದಾನ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ವಿಚಲಿತವಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.
ಸುರತ್ಕಲ್‍ನಲ್ಲಿ ರಾಜಸ್ಥಾನ, ಮದ್ಯಪ್ರದೇಶ, ಚತ್ತೀಸ್‍ಘಡದಲ್ಲಿ ಜಯಗಳಿಸಿದ್ದು, ಈ ಪ್ರಯುಕ್ತ ಸುರತ್ಕಲ್ ಜಂಕ್ಷನ್ ಹಾಗೂ ಕಾವೂರು ಜಂಕ್ಷನ್ ನಲ್ಲಿ ನಡೆದ ವಿಜಯೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ಯಾರಂಟಿಗಳಿಗೆ ಆದ್ಯತೆ ನೀಡದ ಮಹಿಳಾ ಮತದಾರರು ಬಿಜೆಪಿಯನ್ನು ಬೆಂಬಲಿಸಿ ಧಿಕಾರ ಹಿಡಿಯಲು ನೆರವಾಗಿದ್ದಾರೆ.
ತೆಲಂಗಾಣದಲ್ಲಿ ಭಾರೀ ಪ್ರಮಾಣದಲ್ಲಿ ಮತಗಳಿಸಿ ,ಮತದಾರರ ಪ್ರೀತಿಗೆ ಪಾತ್ರವಾಗಿದ್ದೇವೆ. 8ಕ್ಕೂ ಅಧಿಕ ನಮ್ಮ ಶಾಸಕರು ವಿಧಾನಸಭೆ ಪ್ರವೇಶಿಲಿದ್ದಾರೆ. ನಾಯಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ನಾಯಕರ ,ವಿವಿಧ ರಾಜ್ಯದ ಕಾರ್ಯಕರ್ತರ ಅವಿರತ ಶ್ರಮದಿಂದ ಬಿಜೆಪಿ ರಾಜ್ಯಭಾರ ಹೆಚ್ಚಾಗುತ್ತಿದೆ.
ಮುಂದೆ ಲೋಕಸಭೆಯಲ್ಲಿಯೂ ಇಂತಹ ಭರ್ಜರಿ ಫಲಿತಾಂಶ ನಿರೀಕ್ಷಿಸಬಹುದಾಗಿದೆ ಎಂದರು.

ಮಂಡಲದ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಶಕ್ತಿ ಕೇಂದ್ರದ ಪ್ರಮುಖರಾದ ವಿಠಲ ಸಾಲಿಯಾನ್ ಮಾತನಾಡಿದರು. ಪ್ರಮುಖರಾದ ಗಣೇಶ್ ಹೊಸಬೆಟ್ಟು, ಅಶೋಕ್ ಶೆಟ್ಟಿ ತಡಂಬಬೈಲ್, ಸುನಿಲ್ ಕುಳಾಯಿ, ಜಯಂತ್ ಸಾಲಿಯಾನ್, ರಾಜೇಶ್ ಮುಕ್ಕ, ರಣ್‍ದೀಪ್ ಕಾಂಚನ್, ಸಂದೀಪ್ ಪಚ್ಚನಾಡಿ, ಸಿತೇಶ್ ಕೊಂಡೆ ,ಯುವಮೋರ್ಚಾದ ಭರತ್‍ರಾಜ್ ಕೃಷ್ನಾಪುರ, ತಿಲಕ್, ಜಯಾನಂದ ಚೇಳಾೈರು, ಸುರೇಶ್,ಓಂ ಪ್ರಕಾಶ್ ಶೆಟ್ಟಿಗಾರ್, ಮನಪಾ ಸದಸ್ಯರಾದ ಶ್ವೇತ ಪೂಜಾರಿ, ಸರಿತ ಶಶಿಧರ್, ಶೋಭಾ ರಾಜೇಶ್, ಲೋಕೇಶ್ ಬೊಳ್ಳಾಜೆ,ಲೋಹಿತ್ ಅಮೀನ್, ಶರತ್ ಕುಮಾರ್, ಸುಮಂಗಲರಾವ್,ಗಾಯತ್ರಿ ರಾವ್, ಸಂಗೀತಾ ನಾಯಕ್ ಮತ್ತಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು