3:48 AM Wednesday18 - June 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ

ಇತ್ತೀಚಿನ ಸುದ್ದಿ

Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

20/02/2025, 21:20

ಹುಬ್ಬಳ್ಳಿ(reporterkarnataka.com): ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನಿರೀಕ್ಷಿತ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಹಗರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿದಾಗಲೇ ಇದನ್ನು ಹೇಳಿದ್ದೆವು ಎಂದರು.
ಲೋಕಾಯುಕ್ತ ನ್ಯಾಯಾಧೀಶರ ಮೇಲೆ ನಮಗೆ ವಿಶ್ವಾಸ, ಗೌರವವಿದೆ. ಆದರೆ, ಲೋಕಾಯುಕ್ತದಲ್ಲಿ ಹೆಚ್ಚುವರಿ ಎಸ್ಪಿ, ಡಿವೈಎಸ್ಪಿ ಹಂತದ ಅಧಿಕಾರಿಗಳ ಪೋಸ್ಟಿಂಗ್ ಸಿಎಂ ಕೈಯಲ್ಲೇ ಇರುವುದು. ಹಾಗಾಗಿ ತಮ್ಮ ತನಿಖೆಗೆ ಅನುಕೂಲ ಆಗುವವರನ್ನು ನಿಯೋಜಿಸಿಕೊಂಡಿದ್ದಾರೆ ಎಂದು ಸಚಿವ ಜೋಶಿ ಗಂಭೀರ ಆರೋಪ ಮಾಡಿದರು.
ಲೋಕಾಯುಕ್ತ ತನಿಖಾ ಅಧಿಕಾರಿಗಳು ಸಿಎಂಗೆ ಅನುಕೂಲ ಆದಾಗ ವಿಚಾರಣೆಗೆ ಕರೆದಿದ್ದಾರೆ. ರಾತ್ರಿ ವೇಳೆ ಅಧಿಕಾರಿಗಳು ಭೇಟಿ ಆಗಿದ್ದಾರೆ ಎಂದರು.
*ಶುದ್ಧರು ಅನ್ನೋದಾದ್ರೆ ಸಿಬಿಐಗೆ ವಹಿಸಲಿ:* ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅಷ್ಟೊಂದು ಶುದ್ಧ ಹಸ್ತರು ಎಂದಾದರೆ ಸಿಬಿಐ ತನಿಖೆಗೇ ವಹಿಸಲಿ ಎಂದು ಒತ್ತಾಯಿಸಿದ ಜೋಶಿ ಹಿಂದೂ ಇದನ್ನೇ ಹೇಳಿದ್ದೇವೆ. ಆದರೆ, ಸಿಎಂ ಅದನ್ನು ಮಾಡುತ್ತಿಲ್ಲ ಎಂದು ದೂರಿದರು.
ಮುಡಾ ಹಗರಣದಲ್ಲಿ ಪಾರದರ್ಶಕ, ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಸಿಬಿಐ ತನಿಖೆಯೇ ಸೂಕ್ತ. ಸಿದ್ದರಾಮಯ್ಯ ಅವರಿಗೆ ಸಿಬಿಐ ಮೇಲೆ ನಂಬಿಕೆ ಇಲ್ಲದಿದ್ದರೆ ಹೈಕೋರ್ಟ್ ಮಾನಿಟರಿಂಗ್ ಮೂಲಕ ತನಿಖೆಯಾಗಲಿ ಎಂದು ಸಚಿವ ಜೋಶಿ ಹೇಳಿದರು.
*ಪ್ರಯಾಗರಾಜ್ ಮಾಲಿನ್ಯ ಶುದ್ಧವಿದೆ:* ಮಹಾಕುಂಭ ಜರುಗುತ್ತಿರುವ ಪ್ರಯಾಗರಾಜ್ ಅಲ್ಲಿ ಮಾಲಿನ್ಯ ಶುಭ್ರವಾಗೇ ಇದೆ. ನಾನು ಕೂಡ ಶ್ರೀಸಾಮಾನ್ಯ ಜನರ ಮಧ್ಯೆಯೇ ತೀರ್ಥಸ್ನಾನ ಮಾಡಿ ಬಂದಿದ್ದೇನೆ. ಅಷ್ಟೊಂದು ವಿಶಾಲ ಮೇಳದಲ್ಲಿ ಎಲ್ಲೋ ಒಂದು ಕಡೆ ಸ್ವಲ್ಪ ವ್ಯತ್ಯಾಸವಾಗಿದ್ದರೆ ಯೋಗಿ ಆದಿತ್ಯನಾಥ್ ಅವರು ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆಯಲ್ಲಿ ಉತ್ತರಿಸಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು