11:23 PM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಿಗೆ ದಾಳಿ

15/05/2025, 13:41

ಬೆಂಗಳೂರು(reporterkarnataka.com): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದ ಮೇಲೆ ರಾಜ್ಯದ ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಲ್ಲಿ ಸರಕಾರಿ ಅಧಿಕಾರಿಗಳ ಕಚೇರಿ ಮತ್ತು ಮನೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.


ಸುಮಾರು 150ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲಕ್ಕೆ 7 ನಗರಗಳಲ್ಲಿ ದಾಳಿ ನಡೆದಿದೆ. ಬೆಂಗಳೂರು, ಮಂಗಳೂರು,ತುಮಕೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ,ಯಾದಗಿರಿಯ ಶಹಾಪುರದಲ್ಲಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಬೆಂಗಳೂರಿನ 12 ಕಡೆಗಳಲ್ಲಿ ಬೆಂಗಳೂರು ಗ್ರಾಮಾಂತರ 8, ಯಾದಗಿರಿ 5, ವಿಜಯಪುರ 4,ಮಂಗಳೂರಿನ 4 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು
ದಾಳಿ ಮಾಡಿದ್ದಾರೆ. ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ. ತುಮಕೂರಿನಲ್ಲಿ ನಿರ್ಮಿತಿ ಕೇಂದ್ರದ‌ ನಿರ್ದೇಶಕ ರಾಜಶೇಖರ್, ಮಂಗಳೂರಿನಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್, ‌ ವಿಜಯಪುರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ರೇಣುಕಾ. ಸಾತರ್ಲೆ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕರ ಮುರಳಿ ಟಿವಿ, ಬೆಂಗಳೂರು ಕಾನೂನು ಮಾಪನಶಾಸ್ತ್ರದ ಇನ್ಸ್‌ಪೆಕ್ಟರ್ ಎಚ್.ಆರ್ ನಟರಾಜ್ , ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕು ಕಚೇರಿಯ ಎಸ್ ಡಿಎ ಅನಂತ್ ಕುಮಾರ್, ಯಾದಗಿರಿ ಶಹಾಪುರ ತಾಲೂಕಿನ ಉಮಾಕಾಂತ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಅಕ್ರಮ ಸಂಪತ್ತು ಆರೋಪದ ಮೇಲೆ ದಾಳಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು