ಇತ್ತೀಚಿನ ಸುದ್ದಿ
ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಿಗೆ ದಾಳಿ
15/05/2025, 13:41

ಬೆಂಗಳೂರು(reporterkarnataka.com): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದ ಮೇಲೆ ರಾಜ್ಯದ ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಲ್ಲಿ ಸರಕಾರಿ ಅಧಿಕಾರಿಗಳ ಕಚೇರಿ ಮತ್ತು ಮನೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಸುಮಾರು 150ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲಕ್ಕೆ 7 ನಗರಗಳಲ್ಲಿ ದಾಳಿ ನಡೆದಿದೆ. ಬೆಂಗಳೂರು, ಮಂಗಳೂರು,ತುಮಕೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ,ಯಾದಗಿರಿಯ ಶಹಾಪುರದಲ್ಲಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಬೆಂಗಳೂರಿನ 12 ಕಡೆಗಳಲ್ಲಿ ಬೆಂಗಳೂರು ಗ್ರಾಮಾಂತರ 8, ಯಾದಗಿರಿ 5, ವಿಜಯಪುರ 4,ಮಂಗಳೂರಿನ 4 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು
ದಾಳಿ ಮಾಡಿದ್ದಾರೆ. ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ. ತುಮಕೂರಿನಲ್ಲಿ ನಿರ್ಮಿತಿ ಕೇಂದ್ರದ ನಿರ್ದೇಶಕ ರಾಜಶೇಖರ್, ಮಂಗಳೂರಿನಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್, ವಿಜಯಪುರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ರೇಣುಕಾ. ಸಾತರ್ಲೆ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕರ ಮುರಳಿ ಟಿವಿ, ಬೆಂಗಳೂರು ಕಾನೂನು ಮಾಪನಶಾಸ್ತ್ರದ ಇನ್ಸ್ಪೆಕ್ಟರ್ ಎಚ್.ಆರ್ ನಟರಾಜ್ , ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕು ಕಚೇರಿಯ ಎಸ್ ಡಿಎ ಅನಂತ್ ಕುಮಾರ್, ಯಾದಗಿರಿ ಶಹಾಪುರ ತಾಲೂಕಿನ ಉಮಾಕಾಂತ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಅಕ್ರಮ ಸಂಪತ್ತು ಆರೋಪದ ಮೇಲೆ ದಾಳಿ ನಡೆದಿದೆ.