9:00 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ ಲೋಕಾಯುಕ್ತ ಪೊಲೀಸರು

19/03/2026, 20:07

ಕೋಲಾರ(reporterkarnataka.com): ಲಂಚ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಕಾರಿನಲ್ಲಿ ಪರಾರಿಯಾಗುತ್ತಿದ್ದ ಕೋಲಾರ ಸಹಾಯಕ ಔಷಧ ನಿಯಂತ್ರಕಿಯ ಕಾರನ್ನು ಲೋಕಾಯುಕ್ತ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಅವರನ್ನು ಬಂಧಿಸಿದ್ದಾರೆ.
ಔಷಧ ಅಂಗಡಿ ಸ್ಥಳಾಂತರಕ್ಕೆ ಪರ‌ವಾನಗಿ ನೀಡಲು ಕೋಲಾರ ಸಹಾಯಕ ಔಷಧ ನಿಯಂತ್ರಕಿ ಜೆ.ಶ್ಯಾಮಲಾ ₹35 ಸಾವಿರ ಲಂಚ ಪಡೆಯುವಾಗ ಈ ನಾಟಕೀಯ ಘಟನೆ ನಡೆದಿದೆ.ಔಷಧ ಅಂಗಡಿ ಬೇರೆಡೆಗೆ ಸ್ಥಳಾಂತರಕ್ಕೆ ಪರವಾನಗಿ ನೀಡಲು ಅಧಿಕಾರಿ ₹35 ಸಾವಿರ ಲಂಚ ಕೇಳುತ್ತಿದ್ದಾರೆ ಎಂದು ಟೇಕಲ್‌ನ ಅಂಗಡಿ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಟೇಕಲ್‌ನಲ್ಲಿ ಮಂಗಳವಾರ ಕಾರಿನಲ್ಲಿಯೇ ಅಧಿಕಾರಿ ಲಂಚದ ಹಣ ಪಡೆಯುವಾಗ ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಆಯಂಟೊನಿ ಜಾನ್‌ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ತಕ್ಷಣ ಮಹಿಳಾ ಅಧಿಕಾರಿಯು ಸಹಾಯಕ ಔಷಧ ನಿಯಂತ್ರಕರ ಕಚೇರಿಯ ‌’ಡಿ’ ಗ್ರೂಪ್ ನಿವೃತ್ತ ನೌಕರ ಶ್ರೀನಿವಾಸ್‌ ಮತ್ತು ಚಾಲಕನೊಂದಿಗೆ ಕಾರಿನಲ್ಲಿ ಪರಾರಿಯಾದರು.

ಬಂಗಾರಪೇಟೆ ಕಡೆ ವೇಗವಾಗಿ ಹೊರಟ ಕಾರನ್ನು ಲೋಕಾಯುಕ್ತ ಪೊಲೀಸರು ಬೆನ್ನಟ್ಟಿದ್ದಾರೆ. ಸುಮಾರು 15 ಕಿ.ಮೀ. ದೂರ ಬೆನ್ನತ್ತಿದ ನಂತರ ಆರೋಪಿಗಳ ಕಾರಿಗೆ ತಮ್ಮ ಕಾರನ್ನು ಅಡ್ಡ ನಿಲ್ಲಿಸಿ ಹಿಡಿದಿದ್ದಾರೆ.

ಜೆ.ಶ್ಯಾಮಲಾ, ಶ್ರೀನಿವಾಸ್ ಮತ್ತು ಶ್ಯಾಮಲಾ ಅವರ ಕಾರಿನ ಚಾಲಕ ಮಹಾಂತೇಶ್‌ ಅವರನ್ನು ಮಂಗಳವಾರ ರಾತ್ರಿ ಬಂಧಿಸಿರುವುದಾಗಿ ಆಯಂಟೋನಿ ಜಾನ್‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು