10:17 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಲೋಕಸಭೆಯಲ್ಲಿ ಗೆಲುವು: ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಡಾ. ಸುಧಾಕರ್ ಸಹಿತ ಬಿಜೆಪಿಯ ನಾಲ್ವರು ನಾಯಕರಿಗೆ ರಾಜಕೀಯ ಪುನರ್ಜನ್ಮ

04/06/2024, 14:21

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ 4 ಮಂದಿ ಬಿಜೆಪಿ ನಾಯಕರಿಗೆ ರಾಜಕೀಯ ಪುನರ್ಜನ್ಮ ದೊರಕಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಸಿಕ್ಕಂತಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾಂತರ ಮಾಡಿ, ಲೋಕಸಭೆ ಚುನಾವಣೆಯ ವೇಳೆ ಮತ್ತೆ ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹಾವೇರಿ ಬಿಜೆಪಿ ಟಿಕೆಟ್ ಇನ್ನೊರ್ವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಾಲಾದಾಗ ಶೆಟ್ಟರ್ ಮತ್ತೆ ಮುನಿಸಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್ ಶೆಟ್ಟರ್ ಅವರ ಬೀಗರಾದ ಸಂಸದೆ ಮಂಗಳಾ ಅಂಗಡಿ ಅವರಿಗೆ ನೀಡಬೇಕಾದ ಟಿಕೆಟ್ ಅನ್ನು ಜಗದೀಶ ಶೆಟ್ಟರ್ ಅವರಿಗೆ ನೀಡಿತ್ತು. ಇದೀಗ ಶೆಟ್ಟರ್ ಭರ್ಜರಿ ಗೆಲುವು ಕಂಡಿದ್ದಾರೆ. ಹಾಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ವಿಧಾನಸಭೆ ಟಿಕೆಟ್ ನಿರಾಕರಿಸಲಾಗಿತ್ತು. ಕಾಗೇರಿ ಅವರ ರಾಜಕೀಯ ಜೀವನ ಕಮರಿ ಹೋಯಿತು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದರು. ಆದರೆ ತನ್ನ ಮಾತಿನಿಂದಲೇ ಟಿಕೆಟ್ ಕಳೆದುಕೊಂಡ ಸಂಸದ ಅನಂತ ಕುಮಾರ್ ಹೆಗಡೆ ಬದಲಿಗೆ ಕಾಗೇರಿ ಅವರಿಗೆ ಕೊನೆಯ ಕ್ಷಣದಲ್ಲಿ ಬಿಜೆಪಿ ಟಿಕೆಟ್ ನೀಡಿತ್ತು. ಮತದಾರರು ಕೂಡ ಕಾಗೇರಿ ಅವರನ್ನು ಹರಸಿ ಸಂಸತ್ತಿಗೆ ಕಳುಹಿಸಿದ್ದಾರೆ. ಕೊರೊನಾ ಕಾಲದಲ್ಲಿ ಹಗರಣ ನಡೆಸಿದ್ದಾರೆ ಎಂಬ ಆರೋಪಕ್ಕೊಳಗಾಗಿದ್ದ ಮಾಜಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಆದರೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಕೂಡ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು