5:41 AM Monday24 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಲೋಕಸಭೆಯಲ್ಲಿ ಗೆಲುವು: ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಡಾ. ಸುಧಾಕರ್ ಸಹಿತ ಬಿಜೆಪಿಯ ನಾಲ್ವರು ನಾಯಕರಿಗೆ ರಾಜಕೀಯ ಪುನರ್ಜನ್ಮ

04/06/2024, 14:21

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ 4 ಮಂದಿ ಬಿಜೆಪಿ ನಾಯಕರಿಗೆ ರಾಜಕೀಯ ಪುನರ್ಜನ್ಮ ದೊರಕಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಸಿಕ್ಕಂತಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾಂತರ ಮಾಡಿ, ಲೋಕಸಭೆ ಚುನಾವಣೆಯ ವೇಳೆ ಮತ್ತೆ ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹಾವೇರಿ ಬಿಜೆಪಿ ಟಿಕೆಟ್ ಇನ್ನೊರ್ವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಾಲಾದಾಗ ಶೆಟ್ಟರ್ ಮತ್ತೆ ಮುನಿಸಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್ ಶೆಟ್ಟರ್ ಅವರ ಬೀಗರಾದ ಸಂಸದೆ ಮಂಗಳಾ ಅಂಗಡಿ ಅವರಿಗೆ ನೀಡಬೇಕಾದ ಟಿಕೆಟ್ ಅನ್ನು ಜಗದೀಶ ಶೆಟ್ಟರ್ ಅವರಿಗೆ ನೀಡಿತ್ತು. ಇದೀಗ ಶೆಟ್ಟರ್ ಭರ್ಜರಿ ಗೆಲುವು ಕಂಡಿದ್ದಾರೆ. ಹಾಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ವಿಧಾನಸಭೆ ಟಿಕೆಟ್ ನಿರಾಕರಿಸಲಾಗಿತ್ತು. ಕಾಗೇರಿ ಅವರ ರಾಜಕೀಯ ಜೀವನ ಕಮರಿ ಹೋಯಿತು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದರು. ಆದರೆ ತನ್ನ ಮಾತಿನಿಂದಲೇ ಟಿಕೆಟ್ ಕಳೆದುಕೊಂಡ ಸಂಸದ ಅನಂತ ಕುಮಾರ್ ಹೆಗಡೆ ಬದಲಿಗೆ ಕಾಗೇರಿ ಅವರಿಗೆ ಕೊನೆಯ ಕ್ಷಣದಲ್ಲಿ ಬಿಜೆಪಿ ಟಿಕೆಟ್ ನೀಡಿತ್ತು. ಮತದಾರರು ಕೂಡ ಕಾಗೇರಿ ಅವರನ್ನು ಹರಸಿ ಸಂಸತ್ತಿಗೆ ಕಳುಹಿಸಿದ್ದಾರೆ. ಕೊರೊನಾ ಕಾಲದಲ್ಲಿ ಹಗರಣ ನಡೆಸಿದ್ದಾರೆ ಎಂಬ ಆರೋಪಕ್ಕೊಳಗಾಗಿದ್ದ ಮಾಜಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಆದರೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಕೂಡ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು