11:16 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಲೋಕಸಭೆಯಲ್ಲಿ ಗೆಲುವು: ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಡಾ. ಸುಧಾಕರ್ ಸಹಿತ ಬಿಜೆಪಿಯ ನಾಲ್ವರು ನಾಯಕರಿಗೆ ರಾಜಕೀಯ ಪುನರ್ಜನ್ಮ

04/06/2024, 14:21

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ 4 ಮಂದಿ ಬಿಜೆಪಿ ನಾಯಕರಿಗೆ ರಾಜಕೀಯ ಪುನರ್ಜನ್ಮ ದೊರಕಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಸಿಕ್ಕಂತಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾಂತರ ಮಾಡಿ, ಲೋಕಸಭೆ ಚುನಾವಣೆಯ ವೇಳೆ ಮತ್ತೆ ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹಾವೇರಿ ಬಿಜೆಪಿ ಟಿಕೆಟ್ ಇನ್ನೊರ್ವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಾಲಾದಾಗ ಶೆಟ್ಟರ್ ಮತ್ತೆ ಮುನಿಸಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್ ಶೆಟ್ಟರ್ ಅವರ ಬೀಗರಾದ ಸಂಸದೆ ಮಂಗಳಾ ಅಂಗಡಿ ಅವರಿಗೆ ನೀಡಬೇಕಾದ ಟಿಕೆಟ್ ಅನ್ನು ಜಗದೀಶ ಶೆಟ್ಟರ್ ಅವರಿಗೆ ನೀಡಿತ್ತು. ಇದೀಗ ಶೆಟ್ಟರ್ ಭರ್ಜರಿ ಗೆಲುವು ಕಂಡಿದ್ದಾರೆ. ಹಾಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ವಿಧಾನಸಭೆ ಟಿಕೆಟ್ ನಿರಾಕರಿಸಲಾಗಿತ್ತು. ಕಾಗೇರಿ ಅವರ ರಾಜಕೀಯ ಜೀವನ ಕಮರಿ ಹೋಯಿತು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದರು. ಆದರೆ ತನ್ನ ಮಾತಿನಿಂದಲೇ ಟಿಕೆಟ್ ಕಳೆದುಕೊಂಡ ಸಂಸದ ಅನಂತ ಕುಮಾರ್ ಹೆಗಡೆ ಬದಲಿಗೆ ಕಾಗೇರಿ ಅವರಿಗೆ ಕೊನೆಯ ಕ್ಷಣದಲ್ಲಿ ಬಿಜೆಪಿ ಟಿಕೆಟ್ ನೀಡಿತ್ತು. ಮತದಾರರು ಕೂಡ ಕಾಗೇರಿ ಅವರನ್ನು ಹರಸಿ ಸಂಸತ್ತಿಗೆ ಕಳುಹಿಸಿದ್ದಾರೆ. ಕೊರೊನಾ ಕಾಲದಲ್ಲಿ ಹಗರಣ ನಡೆಸಿದ್ದಾರೆ ಎಂಬ ಆರೋಪಕ್ಕೊಳಗಾಗಿದ್ದ ಮಾಜಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಆದರೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಕೂಡ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು