1:45 PM Saturday27 - July 2024
ಬ್ರೇಕಿಂಗ್ ನ್ಯೂಸ್
ಧಾರಾಕಾರ ಮಳೆ: ತೀರ್ಥಹಳ್ಳಿ ರಥಬೀದಿಯಲ್ಲಿ ಮನೆ ಗೋಡೆ ಕುಸಿತ ಬಿರುಸಿನ ಗಾಳಿ ಮಳೆ: ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ಇಂದು ರಜೆ ಅವ್ಯಾಹತ ಬಿರುಸಿನ ಗಾಳಿ ಮಳೆ: ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಶಾಲಾ- ಕಾಲೇಜುಗಳಿಗೆ ರಜೆ ವಾಹನಗಳಲ್ಲಿ ಪ್ರಖರ ಬೆಳಕಿನ ಬಲ್ಬ್ ಅಳವಡಿಕೆ: ಒಟ್ಟು 1170 ಪ್ರಕರಣ ದಾಖಲು; 5.86… ನಾಗಬೇನಾಳ: ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ ಇಲಾಖೆಗಳ ನಡುವೆ ಸಮನ್ವಯತೆ ಕೊರತೆ: ಮರೋಳಿಯ ಡೇಂಜರ್ ಟ್ರೀ ತೆರವಿಗೆ ಮೀನಮೇಷ! ಸ್ಪೆಲ್ ಬೀ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆ: ಮೇರಿಹಿಲ್ ಮೌಂಟ್ ಕಾರ್ ಮೆಲ್ ಸೆಂಟ್ರಲ್… 3 ಘಾಟ್ ಗಳಲ್ಲಿ ಸಂಚಾರ ನಿಷೇಧ: ಜಿಲ್ಲಾಧಿಕಾರಿಗಳ ಸಮನ್ವಯತೆ ಕೊರತೆ ಬಗ್ಗೆ ಪಿಡಬ್ಲ್ಯೂಡಿ… ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಭಾರೀ ಹೆಚ್ಚಳ: ತಗ್ಗು ಪ್ರದೇಶ ಮುಳುಗಡೆ;… ಪ್ರವಾಹ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಂಜುಂಡೇಶ್ವರನಿಗೆ ಜಲದಿಗ್ಬಂಧನ

ಇತ್ತೀಚಿನ ಸುದ್ದಿ

ಲೋಕಸಭೆಯಲ್ಲಿ ಗೆಲುವು: ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಡಾ. ಸುಧಾಕರ್ ಸಹಿತ ಬಿಜೆಪಿಯ ನಾಲ್ವರು ನಾಯಕರಿಗೆ ರಾಜಕೀಯ ಪುನರ್ಜನ್ಮ

04/06/2024, 14:21

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ 4 ಮಂದಿ ಬಿಜೆಪಿ ನಾಯಕರಿಗೆ ರಾಜಕೀಯ ಪುನರ್ಜನ್ಮ ದೊರಕಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಸಿಕ್ಕಂತಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾಂತರ ಮಾಡಿ, ಲೋಕಸಭೆ ಚುನಾವಣೆಯ ವೇಳೆ ಮತ್ತೆ ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹಾವೇರಿ ಬಿಜೆಪಿ ಟಿಕೆಟ್ ಇನ್ನೊರ್ವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಾಲಾದಾಗ ಶೆಟ್ಟರ್ ಮತ್ತೆ ಮುನಿಸಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್ ಶೆಟ್ಟರ್ ಅವರ ಬೀಗರಾದ ಸಂಸದೆ ಮಂಗಳಾ ಅಂಗಡಿ ಅವರಿಗೆ ನೀಡಬೇಕಾದ ಟಿಕೆಟ್ ಅನ್ನು ಜಗದೀಶ ಶೆಟ್ಟರ್ ಅವರಿಗೆ ನೀಡಿತ್ತು. ಇದೀಗ ಶೆಟ್ಟರ್ ಭರ್ಜರಿ ಗೆಲುವು ಕಂಡಿದ್ದಾರೆ. ಹಾಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ವಿಧಾನಸಭೆ ಟಿಕೆಟ್ ನಿರಾಕರಿಸಲಾಗಿತ್ತು. ಕಾಗೇರಿ ಅವರ ರಾಜಕೀಯ ಜೀವನ ಕಮರಿ ಹೋಯಿತು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದರು. ಆದರೆ ತನ್ನ ಮಾತಿನಿಂದಲೇ ಟಿಕೆಟ್ ಕಳೆದುಕೊಂಡ ಸಂಸದ ಅನಂತ ಕುಮಾರ್ ಹೆಗಡೆ ಬದಲಿಗೆ ಕಾಗೇರಿ ಅವರಿಗೆ ಕೊನೆಯ ಕ್ಷಣದಲ್ಲಿ ಬಿಜೆಪಿ ಟಿಕೆಟ್ ನೀಡಿತ್ತು. ಮತದಾರರು ಕೂಡ ಕಾಗೇರಿ ಅವರನ್ನು ಹರಸಿ ಸಂಸತ್ತಿಗೆ ಕಳುಹಿಸಿದ್ದಾರೆ. ಕೊರೊನಾ ಕಾಲದಲ್ಲಿ ಹಗರಣ ನಡೆಸಿದ್ದಾರೆ ಎಂಬ ಆರೋಪಕ್ಕೊಳಗಾಗಿದ್ದ ಮಾಜಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಆದರೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಕೂಡ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು