11:07 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳ, ಬೂತ್ ಅಧ್ಯಕ್ಷರ ಚುನಾವಣೆ ಪೂರ್ವ ತಯಾರಿ ಸಭೆ

30/03/2024, 16:38

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್‌ಎ – 2 ಗಳ ಸಭೆ‌ ಹಾಗೂ ಚುನಾವಣೆ ಪೂರ್ವತಯಾರಿ ಕುರಿತು ಬಿಜೆಪಿ
ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಭೆ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತೀಯ ಜನತಾ ಪಕ್ಷದ ಜನಪರ ಆಡಳಿತಕ್ಕೆ ಜನಮನ್ನಣೆ ಈಗಾಗಲೇ ಸಿಕ್ಕಿದ್ದು, ಕರ್ನಾಟಕದಲ್ಲೂ ಈ ಬಾರಿ ಕಮಲ‌ ಪಡೆ ಐತಿಹಾಸಿಕ ಗೆಲುವು ಸಾಧಿಸುವ ವಿಶ್ವಾಸವಿದೆ. ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ನಮ್ಮ ಪಕ್ಷದ ಕಾರ್ಯಕರ್ತರ ಸಂಘಟನಾತ್ಮಕ ಶಕ್ತಿಯೇ ನಮಗೆ ಶ್ರೀರಕ್ಷೆಯಾಗಲಿದೆ ಎಂದು ಅಣ್ಣಾ ಸಾಹೇಬ್ ಜೊಲ್ಲೆ ನುಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಶ್ರೀಮಂತ ಪಾಟೀಲ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಭಾರಿಗಳು ಹಾಗೂ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಾಜಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಕಾಗವಾಡ ಮಂಡಲದ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ, ವಿಭಾಗಿಯ ಪ್ರಭಾರಿಗಳಾದ ಚಂದ್ರಶೇಖರ ಕವಟಗಿ, ಮಂಡಲ ಉಸ್ತುವಾರಿಗಳಾದ ಅಮೃತ ಕುಲಕರ್ಣಿ, ಚಿಕ್ಕೋಡಿ ಜಿಲ್ಲಾ ಪ್ರಭಾರಿಗಳಾದ ಉಜ್ವಲಾ ಬಡವನಾಚೆ, ಅಭಯ ಅರೊಕೆ ವಕೀಲರು,‌ಕಾಗವಾಡ ಬಿಜೆಪಿ ಮುಖಂಡರಾದ ಶಿವಾನಂದ ಪಾಟೀಲ ನಿಂಗಪ್ಪಾ ಖೋಕಲೆ ವಕೀಲರು, ಪ್ರಭಾಕರ ಚವ್ಹಾಣ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು