12:44 AM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳ, ಬೂತ್ ಅಧ್ಯಕ್ಷರ ಚುನಾವಣೆ ಪೂರ್ವ ತಯಾರಿ ಸಭೆ

30/03/2024, 16:38

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್‌ಎ – 2 ಗಳ ಸಭೆ‌ ಹಾಗೂ ಚುನಾವಣೆ ಪೂರ್ವತಯಾರಿ ಕುರಿತು ಬಿಜೆಪಿ
ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಭೆ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತೀಯ ಜನತಾ ಪಕ್ಷದ ಜನಪರ ಆಡಳಿತಕ್ಕೆ ಜನಮನ್ನಣೆ ಈಗಾಗಲೇ ಸಿಕ್ಕಿದ್ದು, ಕರ್ನಾಟಕದಲ್ಲೂ ಈ ಬಾರಿ ಕಮಲ‌ ಪಡೆ ಐತಿಹಾಸಿಕ ಗೆಲುವು ಸಾಧಿಸುವ ವಿಶ್ವಾಸವಿದೆ. ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ನಮ್ಮ ಪಕ್ಷದ ಕಾರ್ಯಕರ್ತರ ಸಂಘಟನಾತ್ಮಕ ಶಕ್ತಿಯೇ ನಮಗೆ ಶ್ರೀರಕ್ಷೆಯಾಗಲಿದೆ ಎಂದು ಅಣ್ಣಾ ಸಾಹೇಬ್ ಜೊಲ್ಲೆ ನುಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಶ್ರೀಮಂತ ಪಾಟೀಲ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಭಾರಿಗಳು ಹಾಗೂ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಾಜಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಕಾಗವಾಡ ಮಂಡಲದ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ, ವಿಭಾಗಿಯ ಪ್ರಭಾರಿಗಳಾದ ಚಂದ್ರಶೇಖರ ಕವಟಗಿ, ಮಂಡಲ ಉಸ್ತುವಾರಿಗಳಾದ ಅಮೃತ ಕುಲಕರ್ಣಿ, ಚಿಕ್ಕೋಡಿ ಜಿಲ್ಲಾ ಪ್ರಭಾರಿಗಳಾದ ಉಜ್ವಲಾ ಬಡವನಾಚೆ, ಅಭಯ ಅರೊಕೆ ವಕೀಲರು,‌ಕಾಗವಾಡ ಬಿಜೆಪಿ ಮುಖಂಡರಾದ ಶಿವಾನಂದ ಪಾಟೀಲ ನಿಂಗಪ್ಪಾ ಖೋಕಲೆ ವಕೀಲರು, ಪ್ರಭಾಕರ ಚವ್ಹಾಣ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು